Webdunia - Bharat's app for daily news and videos

Install App

ಡಿಸಿಎಂ ಶಿವಕುಮಾರ್‌ರನ್ನು ಭೇಟಿಯಾದ ಹಿರಿಯ ನಟಿ ಅಜ್ಮಿ, ಪ್ರಸಿದ್ಧ ಗೀತರಚನೆಕಾರ ಜಾವೇದ್ ಅಖ್ತರ್

Sampriya
ಸೋಮವಾರ, 24 ಮಾರ್ಚ್ 2025 (16:22 IST)
Photo Courtesy X
ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸೋಮವಾರ ಹಿರಿಯ ನಟಿ ಶಬಾನಾ ಅಜ್ಮಿ ಮತ್ತು ಪ್ರಸಿದ್ಧ ಗೀತರಚನೆಕಾರ ಜಾವೇದ್ ಅಖ್ತರ್ ಅವರು ಭೇಟಿಯಾಗಿ ಕೆಲಹೊತ್ತು ಮಾತನಾಡಿದರು.

ಬೆಂಗಳೂರಿನಲ್ಲಿ ನಡೆದ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆ ಪ್ರಶಸ್ತಿ ಪಡೆದಿದ್ದಕ್ಕಾಗಿ ಶಬನಾ ಅಜ್ಮಿ ಅವರನ್ನು ಡಿಕೆ ಶಿವಕುಮಾರ್ ಅವರು ಅಭಿನಂದಿಸಿದರು.

ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಭೇಟಿಯ ಕ್ಷಣಗಳನ್ನು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.
ಖ್ಯಾತ ಗೀತರಚನೆಕಾರ ಜಾವೇದ್ ಅಖ್ತರ್ ಮತ್ತು ಹಿರಿಯ ನಟಿ ಶಬಾನಾ ಅಜ್ಮಿ ಇಂದು ನನ್ನ ಮನೆಯಲ್ಲಿ ನನ್ನನ್ನು ಭೇಟಿಯಾದರು. 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಜೀವಮಾನ ಸಾಧನೆ
ಪ್ರಶಸ್ತಿ ಪಡೆದಿದ್ದಕ್ಕಾಗಿ ನಾನು ಶಬಾನಾ ಅಜ್ಮಿ ಅವರನ್ನು ಅಭಿನಂದಿಸುತ್ತೇನೆ. ನಾನು ಅಖ್ತರ್ ಅವರೊಂದಿಗೆ ಸೌಹಾರ್ದಯುತ ಚರ್ಚೆ ನಡೆಸಿದೆ ಎಂದು ಅವರು ಬರೆದಿದ್ದಾರೆ.

ಇದಕ್ಕೂ ಮೊದಲು, ಈ ತಿಂಗಳ ಆರಂಭದಲ್ಲಿ ಬೆಂಗಳೂರಿನಲ್ಲಿ ನಡೆದ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಅಂಕುರ್' ನಟಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಪ್ರಸಿದ್ಧ ಗೀತರಚನೆಕಾರ ಜಾವೇದ್ ಅಖ್ತರ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಐದು ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಾದ ಅಜ್ಮಿ, 1988 ರಲ್ಲಿ ಪದ್ಮಶ್ರೀ ಮತ್ತು 2012 ರಲ್ಲಿ ಪದ್ಮಭೂಷಣ ಸೇರಿದಂತೆ ತಮ್ಮ ವೃತ್ತಿಜೀವನದುದ್ದಕ್ಕೂ ಹಲವಾರು ಪುರಸ್ಕಾರಗಳನ್ನು ಪಡೆದಿದ್ದಾರೆ. 'ಅಂಕುರ್', 'ಅರ್ಥ್', 'ಖಂಡರ್', 'ಗಾಡ್‌ಮದರ್' ಮತ್ತು 'ಪಾರ್' ಮುಂತಾದ ಚಿತ್ರಗಳಲ್ಲಿನ ಅತ್ಯುತ್ತಮ ಅಭಿನಯಕ್ಕಾಗಿ ಅವರು ಹೆಸರುವಾಸಿಯಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಸ್ಲಿಮರು ಬಹುಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಕೋರ್ಟ್ ತೀರ್ಪು

India Pakistan:ಪಾಕಿಸ್ತಾನದ ಚೀನಾ ಏರ್ ಡಿಫೆನ್ಸ್ ವ್ಯವಸ್ಥೆಯನ್ನು ಜಾಮ್ ಮಾಡಿದ್ದ ಭಾರತ: ರೋಚಕ ಕಹಾನಿ

Nuclear leak: ಪಾಕಿಸ್ತಾನದ ನ್ಯೂಕ್ಲಿಯರ್ ಸೋರಿಕೆಯಾಗಿಲ್ಲ: ಎಲ್ಲಾ ಸುದ್ದಿ ಸುಳ್ಳು

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments