Webdunia - Bharat's app for daily news and videos

Install App

ಹಿರಿಯ ಸಾಹಿತಿ ಅಂಬಾತಯ ಮುದ್ರಾಡಿ ವಿಧಿವಶ

Webdunia
ಮಂಗಳವಾರ, 21 ಫೆಬ್ರವರಿ 2023 (10:18 IST)
ಉಡುಪಿ : ರಾಜ್ಯೋತ್ಸವ, ಪಾರ್ತಿಸುಬ್ಬ ಪ್ರಶಸ್ತಿಗೆ ಭಾಜನರಾಗಿದ್ದ ಹಿರಿಯ ಸಾಹಿತಿ ಅಂಬಾತಯ ಮುದ್ರಾಡಿ ವಿಧಿವಶರಾಗಿದ್ದಾರೆ.

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಮುದ್ರಾಡಿಯವರಾದ ಇವರು ಶಿಕ್ಷಕರಾಗಿದ್ದುಕೊಂಡು ಯಕ್ಷಗಾನ, ನಾಟಕ, ಸಾಹಿತ್ಯ ಹೀಗೆ ಹಲವು ಆಯಾಮಗಳಲ್ಲಿ ಖ್ಯಾತರಾಗಿದ್ದರು.

ಸಾತ್ವಿಕ ಮನೋಭಾವದ ಸಹೃದಯಿ ಅಂಬಾತನಯ ಮುದ್ರಾಡಿ (88) ಮಂಗಳವಾರ ಮುಂಜಾನೆ ಅಗಲಿದ್ದಾರೆ. ಶಿಕ್ಷಕ, ಹರಿದಾಸ, ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಪೂರ್ಣವಾದ ಸಾಧನೆಯನ್ನು ಮಾಡಿದ್ದ ಅವರು,

ಸಮಾಜದ ಎಲ್ಲ ಮಂದಿಗೆ ಮನೆಯ ಸದಸ್ಯನಂತೆ ಇದ್ದು ಮಾರ್ಗದರ್ಶನ ಮಾಡಿದ್ದರು. ಸಾರ್ಥಕವಾಗಿ ಬದುಕನ್ನು ಪೂರೈಸಿದ ಅಂಬಾತನಯರದ್ದು ಆದರ್ಶ ಜೀವನ ಎಂದು ಅವರ ಹಿತೈಶಿಗಳ ಮನದಾಳದ ಮಾತು.

ಕಳೆದ ವಾರ ಉಡುಪಿಯಲ್ಲಿ ನಡೆದ ಪ್ರಥಮ ಯಕ್ಷಗಾನ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದದಲ್ಲಿ ಪಾಲ್ಗೊಂಡದ್ದು, ಅವರ ಕೊನೆಯ ಕಾರ್ಯಕ್ರಮವಾಗಿತ್ತು. ಈ ಸಂದರ್ಭದಲ್ಲಿ ಯಕ್ಷಗಾನ ಮತ್ತು ಹರಿಕಥೆ ಒಂದು ತೌಲನಿಕ ಅಧ್ಯಯನ ಪುಸ್ತಕವನ್ನು ಪ್ರಕಟಿಸಲಾಗಿತ್ತು.

ರಾಜ್ಯೋತ್ಸವ ಪ್ರಶಸ್ತಿ, ಪಾರ್ತಿಸುಬ್ಬ ಪ್ರಶಸ್ತಿ ಮುಂತಾದ ಶ್ರೇಷ್ಠ ಗೌರವಗಳು ಅವರಿಗೆ ಅರ್ಹವಾಗಿ ಪ್ರಾಪ್ತಿಯಾಗಿವೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಮಾಡಿದ್ದಾರೆ. ಪತ್ನಿ, ಮೂವರು ಪುತ್ರರು, ಐವರು ಪುತ್ರಿಯರನ್ನು ಹಾಗೂ ಅಪಾರ ಶಿಷ್ಯ ವೃಂದವನ್ನು ಅಂಬಾತನಯರು ಅಗಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಲ್ಶಿಯಂ ಟ್ಯಾಬ್ಲೆಟ್ ಅತಿಯಾಗಿ ಸೇವಿಸುತ್ತಿದ್ದರೆ ಡಾ ಬಿಎಂ ಹೆಗ್ಡೆಯವರ ಸಲಹೆ ಕೇಳಿ

ಸತ್ತ ಆರ್ಥಿಕತೆ ಎಂದು ರಷ್ಯಾ, ಭಾರತಕ್ಕೆ ನಿಂದಿಸಿ ಈಗ ರಷ್ಯಾಕ್ಕೇ ಹೊರಟ ಡೊನಾಲ್ಡ್ ಟ್ರಂಪ್

ಡೊನಾಲ್ಡ್ ಟ್ರಂಪ್ ಹೀಗೇ ಮಾಡ್ತಿದ್ದರೆ ಭಾರತಕ್ಕೆ ಇದೊಂದೇ ದಾರಿ ಉಳಿಯೋದು

ಧರ್ಮಸ್ಥಳ ಗಲಾಟೆ: ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟೆಣ್ಣನವರ್, ಸಮೀರ್ ವಿರುದ್ಧ ಕೇಸ್

ಭಾರತಕ್ಕೆ ಟ್ರಂಪ್ ಸುಂಕ: ಮೋದಿ ಬೆಂಬಲಿಸಿದ್ದಕ್ಕೆ ಸರಿಯಾಗಿಯೇ ಮಾಡಿದ್ರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments