Webdunia - Bharat's app for daily news and videos

Install App

ಟೂಡಾ ಆಯುಕ್ತ ಹುದ್ದೆ ಮೇಲೆ ಪಶು ವೈದ್ಯನ ಕಣ್ಣು!

Webdunia
ಶನಿವಾರ, 29 ಸೆಪ್ಟಂಬರ್ 2018 (18:41 IST)
ಸಮ್ಮಿಶ್ರ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆಯಾ? ರಾಜಕೀಯ ಪ್ರಭಾವವಿದ್ರೆ ಯಾರ್ ಏನ್ ಬೇಕಾದ್ರು ಆಗಬಹುದಾ? ಎನ್ನುವ ಪ್ರಶ್ನೆಗಳು ಕೇಳಿ ಬರಲಾರಂಭಿಸಿವೆ.

ತುಮಕೂರು ಜಿಲ್ಲೆ ಮಟ್ಟಿಗೆ ಇದು ನಿಜ ಕೂಡಾ ಆಗುವ ಸಾಧ್ಯತೆ ಇದೆ. ಮೂಲತಃ ಪಶು ವೈದ್ಯಾಧಿಕಾರಿಯಾಗಿರುವ ಡಾ. ನಾಗಣ್ಣ ಎಂಬುವರು ಮಾಜಿ ಸಚಿವ ಜಯಚಂದ್ರ ಆಪ್ತ ವಲಯದಲ್ಲಿ ಗುರ್ತಿಸಿಕೊಂಡಿದ್ದರು. ಸಿದ್ದರಾಮಯ್ಯ ಸರ್ಕಾರದಲ್ಲಿ ತುಮಕೂರು ತಾಲ್ಲೂಕಿನ ತಾಲ್ಲೂಕು ಪಂಚಾಯ್ತಿ ನಿರ್ವಹಣಾಧಿಕಾರಿಯಾಗಿದ್ರು. ಆದರೆ ಪಶು ಇಲಾಖೆಯಲ್ಲಿ ವೈದ್ಯಾಧಿಕಾರಿಗಳೇ ಇಲ್ಲದಿದ್ರೂ ಸಹ ಜಯಚಂದ್ರ ಇವರನ್ನು ಡೆಪ್ಟೇಷನ್ ಮೇಲೆ ತಾಲ್ಲೂಕು ಪಂಚಾಯ್ತಿ ಇ.ಒ ಮಾಡಿದ್ರು.

ಇದಕ್ಕೂ ಮುನ್ನಾ ಜಯಚಂದ್ರ ಅವರ ವಿಶೇಷ ಅಧಿಕಾರಿಯನ್ನಾಗಿ ಮಾಡಿಕೊಂಡಿದ್ರು. ಇದೀಗ ಇದನ್ನೇ ಬಂಡವಾಳ ಮಾಡಿಕೊಂಡ ಡಾ. ನಾಗಣ್ಣ ಈಗ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. 

ರಾಜ್ಯ ಸರ್ಕಾರದಲ್ಲಿ ಸಾಕಷ್ಟು ಜನ ಸಮರ್ಥ ಅಧಿಕಾರಿಗಳಿದ್ದರೂ ಸಹ ನಾಗಣ್ಣನನ್ನು ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಬಹುದು ಎಂಬ ಉದ್ದೇಶದಿಂದ ಟೂಡಾ ಆಯುಕ್ತರಾಗಿ  ನೇಮಕ ಮಾಡಲು ಹೊರಟಿದೆ ಎನ್ನಲಾಗಿದೆ.  ಶತಾಯಗತಾಯ ಆ ಹುದ್ದೆಗೆ ಬರಲೇಬೇಕೆಂದು ಈಗಾಗಲೇ ಉಪ ಮುಖ್ಯಮಂತ್ರಿ ಪರಮೇಶ್ವರ್ ಹಾಗೂ ಸಂಸದ ಮುದ್ದಹನುಮೇಗೌಡ್ರಿಂದ ಶಿಪಾರಸ್ಸಿ‌ನ ಪತ್ರ ಕೂಡಾ ಪಡೆದಿದ್ದಾರೆ ಎನ್ನಲಾಗಿದೆ. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ನಾಗಣ್ಣನನ್ನು ಆಯುಕ್ತರ ಹುದ್ದೆಗೆ ನೇಮಕ‌ ಮಾಡಲು ತೆರೆ ಮರೆಯ ಕಸರತ್ತು ನಡೆಯುತ್ತಿದೆ ಎಂಬ ಮಾತುಗಳು ಹರಿದಾಡಲಾರಂಭಿಸಿವೆ. ಗಡಿನಾಡ ಫೌಂಡೇಷನ್ ಅಧ್ಯಕ್ಷ ಯಶೋಧರ ಎಂಬುವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಅವೈಜ್ಞಾನಿಕ ಪದ್ದತಿಯಾಗಿದ್ದು ಜಿಲ್ಲೆಯಲ್ಲಿ ಪಶುಗಳು ರೋಗ ಬಂದು ಸಾಯುತ್ತಿವೆ. ಪಶು ಸಂಗೋಪನೆ ಇಲಾಖೆಯಲ್ಲಿ ವೈದ್ಯರ ಕೊರತೆ ಇದೆ. ಹೀಗಾಗಿ ಡಾ. ನಾಗಣ್ಣ ಮಾತೃ ಇಲಾಖೆಯಲ್ಲಿ ಮುಂದುವರಿಯುವುದು ಸೂಕ್ತ ಎಂದಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments