Webdunia - Bharat's app for daily news and videos

Install App

31ರಂದು ಪಶು ವಿವಿ ಘಟಿಕೋತ್ಸವ: ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಉಪಸ್ಥಿತಿ

Webdunia
ಗುರುವಾರ, 30 ಆಗಸ್ಟ್ 2018 (14:44 IST)
ರಾಜ್ಯದ ಏಕೈಕ ಕರ್ನಾಟಕ ಪಶು ವೈದ್ಯಕೀಯ,ಪಶು ಹಾಗೂ ಮೀನುಗಾರಿಕೆ ವಿಜ್ಱನಿಗಳ ವಿಶ್ವವಿದ್ಯಾನಿಲಯದಲ್ಲಿ ಇದೇ ತಿಂಗಳ 31ರ   ಬೆಳಿಗ್ಗೆ 11ಗಂಟೆಗೆ ಘಟಿಕೋತ್ಸವ ನಡೆಯಲಿದೆ.

ಬೀದರ್ ನಗರದ ಹೊರವಲಯದ ನಂದಿ ನಗರದಲ್ಲಿರುವ ವಿವಿಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯಾ ನಾಯ್ಡು ಮುಖ್ಯ ಅತಿಥಿಗಳಾಗಿ,ರಾಜ್ಯಪಾಲ ವಾಜುಭಾಯಿ ರುಡಾಭಾಯಿ ವಾಲಾ, ಪಶು ಸಂಗೋಪನಾ ಸಚಿವ ವೆಂಕಟರಾವ ನಾಡಗೌಡ, ಸಚಿವ ಬಂಡೆಪ್ಪಾ ಕಾಶಂಪೂರ್ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಅಂದು ನಡೆಯುವ ಘಟಿಕೋತ್ಸವದಲ್ಲಿ 447 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ. ಅದರಲ್ಲಿ 309 ಸ್ನಾತಕ ಪದವಿಧರರು,109 ಸ್ನಾತಕೋತ್ತರ ಪದವಿಧರರು, 29ಡಾಕ್ಟರೇಟ್ ಪದವಿಧರರು ಇರಲಿದ್ದಾರೆ. 34ಪದವಿಧರ ವಿದ್ಯಾರ್ಥಿಗಳು 66 ಚಿನ್ನದ ಪದಕಗಳನ್ನ ಕೊರಳಿಗೆ ಹಾಕಿಕೊಂಡು ಸಂಭ್ರಮಿಸಲಿದ್ದಾರೆ.

ಎಲ್ಲಕಿಂತ ಹೆಚ್ಚು ಹಾಸನದ ಪಶು ವೈದ್ಯಕೀಯ ವಿದ್ಯಾರ್ಥಿನಿ ಅಶ್ವಿನಿ ಬರೊಬ್ಬರಿ 11ಚಿನ್ನದ ಪದಕಗಳನ್ನ ಕೊರಳಿಗೆ ಹಾಕಿಕೊಂಡರೆ, ಬೀದರ್ ವೈದ್ಯಕೀಯ ಮಹಾವಿದ್ಯಾನಿಲಯದ ವಿದ್ಯಾರ್ಥಿ ರಾಮಕುಮಾರ 8 ಚಿನ್ನದ ಪದಕಗಳನ್ನ ಪಡೆಯಲಿದ್ದಾರೆ. ಅದಕ್ಕಾಗಿ ಅಂತಿಮ ಹಂತದ ಸಿದ್ದತೆ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಜೋರಾಗಿ ನಡೆದಿದೆ ಎಂದು ವಿಶ್ವ ವಿದ್ಯಾನಿಲಯ ಕುಲಪತಿ ನಾರಾಯಣ ಸ್ವಾಮಿ ಹೇಳಿದ್ದಾರೆ.





ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments