Webdunia - Bharat's app for daily news and videos

Install App

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಪತ್ರದ ಮೂಲಕ ಖಡಕ್ ಎಚ್ಚರಿಕೆ ಕೊಟ್ಟ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ

Webdunia
ಶುಕ್ರವಾರ, 27 ಸೆಪ್ಟಂಬರ್ 2019 (12:05 IST)
ಬೆಂಗಳೂರು : ಸಿಎಂ ಬಿಎಸ್ ವೈಯನ್ನು ಕಡೆಗಣಿಸಿ ಪಕ್ಷ ಸಂಗಟನೆಗೆ ಮುಂದಾದ್ರೆ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳವುದು ಕಷ್ಟ ಎಂದು ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷ ಭೀಮಾಶಂಕರ್ ಪಾಟೀಲ್ ಅವರು ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲಿಗೆ ಪತ್ರ ಮೂಲಕ ಎಚ್ಚರಿಕೆ ನೀಡಿದ್ದಾರೆ.




ಈ ಹಿಂದೆ ರಾಯಣ್ಣ ಬ್ರಿಗೇಡ್ ಗೆ ಬೆಂಬಲಿಸಿ ಬಿಎಸ್‍ವೈ ವಿರೋಧ ಕಟ್ಟಿಕೊಂಡಿದ್ದ ಮಾಜಿ ಶಾಸಕ ನಿರ್ಮಲ್ ಕುಮಾರ್ ಸುರಾನಾ ಅವರಿಗೂ ಕಟೀಲ್ ಬಿಜೆಪಿ ಉಪಾಧ್ಯಕ್ಷ ಪಟ್ಟವನ್ನು ನೀಡಿರುವುದು ಈಗ ಹಲವು ಚರ್ಚೆಗೆ ಗ್ರಾಸವಾಗಿದ್ದು, ಸಿಎಂ ನ್ನು ನಳಿನ್ ಕುಮಾರ್ ಕಟೀಲು ಕಡೆಗಣಿಸುತ್ತಿದ್ದಾರೆ ಎನ್ನಲಾಗಿದೆ.


ಈ ಬಗ್ಗೆ ನಳಿನ್ ಕುಮಾರ್ ಕಟೀಲಿಗೆ ಪತ್ರ ಬರೆದ ಭೀಮಾಶಂಕರ್ ಪಾಟೀಲ್ ಅವರು,  ಸಿಎಂ ಯಡಿಯೂರಪ್ಪರನ್ನು ಕಡೆಗಣಿಸಿದರೆ  ನಿಷ್ಠಾವಂತ ಕಾರ್ಯಕರ್ತರು ರಾಜೀನಾಮೆ ನೀಡಬೇಕಾಗುತ್ತದೆ. ನೀವು ಬಿಎಸ್ ವೈಯನ್ನು ಕಡೆಗಣಿಸ್ತಿರುವುದನ್ನು ಖಂಡಿಸ್ತೇವೆ, ಉತ್ತರ ಕರ್ನಾಟಕ ಭಾಗದಲ್ಲಿರುವ ಲಿಂಗಾಯುತ ಸಮುದಾಯ ಯಡಿಯೂರಪ್ಪ ಅವರಿಗಾಗಿಯೇ ಬಿಜೆಪಿಯನ್ನು ಬೆಂಬಲಿಸಿದೆ. ಈ ವಿಷಯವನ್ನು ನೀವು ಮರೆಯುವಂತಿಲ್ಲ. ನೀವು ಸಿಎಂ ಯಡಿಯೂರಪ್ಪರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ  ಎಂದು ಪತ್ರದ ಮೂಲಕ ಖಡಕ್ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments