ರಸ್ತೆ ಗುಂಡಿಗೆ ಮತ್ತೊಂದು ಬಲಿ

Webdunia
ಭಾನುವಾರ, 30 ಜನವರಿ 2022 (17:54 IST)
ಕೊಟ್ಟಿಗೆಪಾಳ್ಯದ ಶರ್ಮಿಳಾ (38) ಮಾಗಡಿ ಮುಖ್ಯರಸ್ತೆ ಅಂಜನಾನಗರದಲ್ಲಿ ರಸ್ತೆ ಗುಂಡಿಯಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.
 
ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಕುಳಿತು ತಾವರೆಕೆರೆ ಕಡೆಗೆ ಮಹಿಳೆ ತೆರಳುತ್ತಿದ್ದರು. ಕಾವೇರಿ ನೀರಿನ ಪೈಪ್‍ಲೈನ್ ಅಳವಡಿಕೆಗಾಗಿ ಮಾಗಡಿ ಮುಖ್ಯರಸ್ತೆಯ ಅಂಜನಾನಗರದಿಂದ ದೊಡ್ಡ ಗೊಲ್ಲರಹಟ್ಟಿಯವರೆಗೆ ರಸ್ತೆಯನ್ನು ಅಗೆದು ಮುಚ್ಚದೆ ಹಾಗೇ ಬಿಡಲಾಗಿದೆ. ಇಲ್ಲಿನ ಹರಿಹರ ಪುತ್ರ ಅಯ್ಯಪ್ಪಸ್ವಾಮಿ ದೇವಸ್ಥಾನದ ಸಮೀಪ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಬೈಕ್ ಸವಾರ ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿದಾಗ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ರಸ್ತೆಗೆ ಬಿದ್ದಿದ್ದಾರೆ.
 
ಈ ವೇಳೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಆಕೆಯ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೊಲೆರೋ ಚಾಲಕ ಮಾದೇಶ್‍ನ್ನು ಬಂಧಿಸಿದ ಬ್ಯಾಡರಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ರಸ್ತೆ ಗುಂಡಿಗಳಿಂದಾಗಿ ನಾಗರಿಕರು ಪ್ರಾಣ ಕಳೆದುಕೊಳ್ಳುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಗುಂಡಿಗಳನ್ನು ಮುಚ್ಚಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಎಚ್ಚರಿಕೆ ನೀಡಿದೆ.
 
ಆದಾಗ್ಯೂ ಬಿಬಿಎಂಪಿ, ಬಿಡಬ್ಲ್ಯುಎಸ್ ಎಸ್ ಬಿ ಇತರೆ ಇಲಾಖೆಗಳ ನಡುವಿನ ಸಮನ್ವಯತೆಯ ಕೊರತೆಯಿಂದಾಗಿ ಹದಗೆಟ್ಟಿರುವ ರಸ್ತೆಗಳಲ್ಲಿ ವಾಹನ ಸವಾರರು ನರಕಯಾತನೆ ಅನುಭವಿಸುವಂತಾಗಿದೆ. ಪ್ರತಿನಿತ್ಯ ಇಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಎರಡು ತಿಂಗಳಿಂದೀಚೆಗೆ ಅಬಕಾರಿ ಅಕಾರಿ ಕೃಷ್ಣಪ್ಪ ಸೇರಿದಂತೆ ಐದಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೈರತಿ ಸುರೇಶ್ ಅರೆಸ್ಟ್‌

ಭಾರತಕ್ಕೆ ವಾಪಾಸ್‌ ಬಂದ್ರೆ ಅಷ್ಟೆ, ವಿಜಯ್ ಮಲ್ಯಗೆ ಹೈಕೋರ್ಟ್ ಚಾಟಿ

ವಿಡಿಯೋ ಹೆಚ್ಚು ವೀಕ್ಷಣೆ ಪಡೆಯಲು ಮಾಡಿದ ಯಡವಟ್ಟಿಗೆ ಫುಡ್ ವ್ಲೋಗರ್‌, ಏನಾಯಿತು

ಆದಾಯಕ್ಕಿಂತ ಹೆಚ್ಚು ಆಸ್ತಿ, ಶೋಧಕ್ಕೆ ಹೋದ ಲೋಕಾಯುಕ್ತ ಖಾಕಿ ಫುಲ್ ಶಾಕ್

ಫೆಬ್ರವರಿ 18-22 ರವರೆಗೆ ಬ್ರೆಜಿಲ್ ಅಧ್ಯಕ್ಷ ಲೂಲಾ ಭಾರತಕ್ಕೆ ಭೇಟಿ

ಮುಂದಿನ ಸುದ್ದಿ
Show comments