Select Your Language

Notifications

webdunia
webdunia
webdunia
webdunia

ವಾಕಿಂಗ್ ಗೆ ಹೋದ ಮಾಜಿ ಉಪಕುಲಪತಿಯನ್ನು ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು

ವಾಕಿಂಗ್ ಗೆ ಹೋದ ಮಾಜಿ ಉಪಕುಲಪತಿಯನ್ನು ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು
ಬೆಂಗಳೂರು , ಬುಧವಾರ, 16 ಅಕ್ಟೋಬರ್ 2019 (11:14 IST)
ಬೆಂಗಳೂರು : ವಾಕಿಂಗ್ ಗೆ ತೆರಳಿದ್ದ ಅಲಯನ್ಸ್ ಯೂನಿವರ್ಸಿಟಿ ಮಾಜಿ ಉಪಕುಲಪತಿಯನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ ಘಟನೆ ನಿನ್ನೆ ಬೆಂಗಳೂರಿನ ಆರ್.ಟಿ.ನಗರದಲ್ಲಿ ನಡೆದಿದೆ.




ಮಾಜಿ ಉಪಕುಲಪತಿ ಅಯ್ಯಪ್ಪ ದೊರೆ ಕೊಲೆಯಾದ ವ್ಯಕ್ತಿ. ಪ್ರತಿದಿನ ರಾತ್ರಿ ಊಟ ಮುಗಿಸಿ ವಾಕಿಂಗ್ ಗೆ ಹೊರಗೆ ಹೋಗುತ್ತಿದ್ದ ಅಯ್ಯಪ್ಪ ದೊರೆ ನಿನ್ನೆ ಕೂಡ ವಾಕಿಂಗ್ ಗೆ ಹೋಗಿದ್ದಾಗ ಅವರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಆರ್.ಟಿ.ನಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಹುಡುಕಾಟಕ್ಕಾಗಿ ಬಲೆ ಬೀಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ- ಸಿಎಂ ಬಿಎಸ್ ವೈ