ಆಮರಣ ಉಪವಾಸ ಸತ್ಯಾಗ್ರಹ ಶುರುಮಾಡಿದ ಸಂತ್ರಸ್ತರು: ಸರಕಾರಕ್ಕೆ ಶಾಕ್

Webdunia
ಶುಕ್ರವಾರ, 1 ನವೆಂಬರ್ 2019 (17:36 IST)
ಕೃಷ್ಣಾ ನದಿಯ ಹಿಪ್ಪರಗಿ ಆಣೆಕಟ್ಟೆ ಹಿನ್ನೀರಿನಿಂದ ತೀವ್ರ ತೊಂದರೆಗೆ ಒಳಗಾದ ಜನರು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ.

ಕೃಷ್ಣಾ ನದಿಯ ಹಿಪ್ಪರಗಿ ಆಣೆಕಟ್ಟೆ ಹಿನ್ನೀರಿನಿಂದ ಬಾಧಿತವಾಗಿರುವ ಕವಟಕೊಪ್ಪ ಗ್ರಾಮದ 900 ಮನೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಆಮರಣ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.

ಅಥಣಿ ತಾಲ್ಲೂಕು ತಹಸೀಲ್ದಾರ್ ಕಚೇರಿ ಆವರಣದಲ್ಲಿ  ಪ್ರತಿಭಟನೆ ನಡೆಸಲಾಗುತ್ತಿದ್ದು, ಉಪವಾಸ ಸತ್ಯಾಗ್ರಹ  ಎರಡನೇ ದಿನಕ್ಕೆ ಮುಂದುವರೆದಿದೆ.

ಅಧಿಕಾರಿಗಳು ಸರ್ವೇ ಮಾಡುವ ಸಂದರ್ಭದಲ್ಲಿ ತಾರತಮ್ಯ ಮಾಡುತ್ತಿದ್ದು, ಇದರಿಂದಾಗಿ ನಿಜವಾದ ಸಂತ್ರಸ್ತರಿಗೆ ಅನ್ಯಾಯವಾಗುತ್ತಿದೆ ಎಂದು ಹೋರಾಟಗಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸತ್ತಿ ಗ್ರಾಮದ ಹೊರವಲಯದಲ್ಲಿ ಜಮಖಂಡಿ ತಾಲ್ಲೂಕು ಹಿಪ್ಪರಗಿಯಲ್ಲಿ ಬ್ಯಾರೇಜ್ ನಿರ್ಮಾಣ ಮಾಡಿದ್ದು, ಈ
ಆಣೆಕಟ್ಟೆ ಹಿನ್ನೀರಿನಿಂದಾಗಿ ಬಾಧಿತವಾಗಿರುವ ಕವಟಕೊಪ್ಪ ಗ್ರಾಮದ 162 ಕುಟುಂಬಗಳಿಗೆ ಪರಿಹಾರ ಕೊಟ್ಟಿಲ್ಲ.

ಅಷ್ಟೇ ಅಲ್ಲದೆ ಸಪ್ತಸಾಗರ, ತೀರ್ಥ, ಇಂಗಳಗಾಂವ, ದರೂರ, ಅವರಕೋಡ, ಕುಸನಾಳ, ಮಳವಾಡ, ಶೇಗುಣಸಿ, ಬಣಜವಾಡ, ಕಾತ್ರಾಳ ಸೇರಿದಂತೆ ಇಪ್ಪತ್ತಾರು ಗ್ರಾಮಗಳ ಗ್ರಾಮಸ್ಥರಿಗೆ ಇನ್ನೂ ಕೂಡ ಶಾಶ್ವತ ಪರಿಹಾರ ಸಿಕ್ಕಿಲ್ಲ ಎಂದು ದೂರಿದ್ದಾರೆ.  

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments