ಗೆಲುವು ಖಚಿತ ಎನಿಸುತ್ತಿದೆ: ನಾಮಪತ್ರ ಸಲ್ಲಿಸಿದ ನಂತರ ಡಾ.ಮಂಜುನಾಥ್ ವಿಶ್ವಾಸ

Sampriya
ಗುರುವಾರ, 4 ಏಪ್ರಿಲ್ 2024 (15:46 IST)
Photo Courtesy X
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ಇಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಮಂಜುನಾಥ್ ಅವರು, ಕಾರ್ಯಕರ್ತರ ಉತ್ಸಾಹ ನೋಡಿದರೆ, ಗೆಲುವು ಖಚಿತ ಎನ್ನಿಸುತ್ತಿದೆ. ಅಮಿತ್ ಶಾ ಕೂಡಾ ಆಗಮಿಸಿ ನನ್ನ ಪರ ರೋಡ್ ಶೋ ಮಾಡಿದ್ದಾರೆ. ಇದರಿಂದ ನಮ್ಮ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ. ಎರಡೂ ಪಕ್ಷಗಳ ಕಾರ್ಯಕರ್ತರ ಹೃದಯ ಒಂದಾಗಿದೆ. ನನ್ನ ಗೆಲುವಿಗಾಗಿ ಎರಡೂ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಮತದಾರರು ಯಾವುದೇ ತಂತ್ರ, ಕುತಂತ್ರಕ್ಕೆ ಮಣೆ ಹಾಕುವುದಿಲ್ಲ. ಜನ ಬುದ್ಧಿವಂತರಿದ್ದಾರೆ, ಆಮೀಷಗಳಿಗೆ ಬಲಿಯಾಗದೇ ನನ್ನನ್ನ ಬೆಂಬಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ, ಅಶ್ವಥ್ ನಾರಾಯಣ್, ಮುನಿರತ್ನ ಹಾಗೂ ಡಾ.ಮಂಜುನಾಥ್ ಪೂಜೆ ಸಲ್ಲಿಸಿ, ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ವಳೇ ಪತ್ನಿ ಅನುಸೂಯ, ಎಮ್.ಕೃಷ್ಣಪ್ಪ ಹಾಗೂ ಚಿಂತಕಿ ಸುಧಾ ಬರಗೂರು ಸಾಥ್ ನೀಡಿದರು.

ಇನ್ನೂ ನಾಮಪತ್ರಿಕೆಗೆ ತಡವಾಗುವ ನಿಟ್ಟಿನಲ್ಲಿ ಮೆರವಣಿಗೆ ರದ್ದು ಮಾಡಿದ್ದರು ಸಾವಿರಾರು ಸಂಖ್ಯೆಯಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments