Webdunia - Bharat's app for daily news and videos

Install App

ಗೆಲುವು ಖಚಿತ ಎನಿಸುತ್ತಿದೆ: ನಾಮಪತ್ರ ಸಲ್ಲಿಸಿದ ನಂತರ ಡಾ.ಮಂಜುನಾಥ್ ವಿಶ್ವಾಸ

Sampriya
ಗುರುವಾರ, 4 ಏಪ್ರಿಲ್ 2024 (15:46 IST)
Photo Courtesy X
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ಇಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆ ನಂತರ ಮಾತನಾಡಿದ ಮಂಜುನಾಥ್ ಅವರು, ಕಾರ್ಯಕರ್ತರ ಉತ್ಸಾಹ ನೋಡಿದರೆ, ಗೆಲುವು ಖಚಿತ ಎನ್ನಿಸುತ್ತಿದೆ. ಅಮಿತ್ ಶಾ ಕೂಡಾ ಆಗಮಿಸಿ ನನ್ನ ಪರ ರೋಡ್ ಶೋ ಮಾಡಿದ್ದಾರೆ. ಇದರಿಂದ ನಮ್ಮ ಹೋರಾಟಕ್ಕೆ ಮತ್ತಷ್ಟು ಬಲ ಬಂದಿದೆ. ಎರಡೂ ಪಕ್ಷಗಳ ಕಾರ್ಯಕರ್ತರ ಹೃದಯ ಒಂದಾಗಿದೆ. ನನ್ನ ಗೆಲುವಿಗಾಗಿ ಎರಡೂ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಮತದಾರರು ಯಾವುದೇ ತಂತ್ರ, ಕುತಂತ್ರಕ್ಕೆ ಮಣೆ ಹಾಕುವುದಿಲ್ಲ. ಜನ ಬುದ್ಧಿವಂತರಿದ್ದಾರೆ, ಆಮೀಷಗಳಿಗೆ ಬಲಿಯಾಗದೇ ನನ್ನನ್ನ ಬೆಂಬಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಚಾಮುಂಡೇಶ್ವರಿ ದೇವಾಲಯದಲ್ಲಿ, ಅಶ್ವಥ್ ನಾರಾಯಣ್, ಮುನಿರತ್ನ ಹಾಗೂ ಡಾ.ಮಂಜುನಾಥ್ ಪೂಜೆ ಸಲ್ಲಿಸಿ, ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ವಳೇ ಪತ್ನಿ ಅನುಸೂಯ, ಎಮ್.ಕೃಷ್ಣಪ್ಪ ಹಾಗೂ ಚಿಂತಕಿ ಸುಧಾ ಬರಗೂರು ಸಾಥ್ ನೀಡಿದರು.

ಇನ್ನೂ ನಾಮಪತ್ರಿಕೆಗೆ ತಡವಾಗುವ ನಿಟ್ಟಿನಲ್ಲಿ ಮೆರವಣಿಗೆ ರದ್ದು ಮಾಡಿದ್ದರು ಸಾವಿರಾರು ಸಂಖ್ಯೆಯಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments