ಕೊರೊನಾದಿಂದ ಸತ್ತರೂ ಕಾಲಿಡದ ಡಿಸಿಎಂ ನಡೆಸಿದ್ರು ವಿಡಿಯೋ ಕಾನ್ಫರೆನ್ಸ್

Webdunia
ಮಂಗಳವಾರ, 17 ಮಾರ್ಚ್ 2020 (19:37 IST)
ಕೊರೋನಾ ಸೋಂಕಿನಿಂದ ವ್ಯಕ್ತಿಯೋರ್ವ ಮೃತರಾದರಿಂದ ಕಲಬುರಗಿಯಲ್ಲಿ ಕೊರೋನಾ ಭೀತಿ ಹೆಚ್ಚಿದ್ದು, ಮುಂಜಾಗ್ರತ ಕ್ರಮವಾಗಿ ಕಲಬುರಗಿ ಜಿಲ್ಲೆಯ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು.

ಹೀಗಂತ ಉಪ ಮುಖ್ಯಮಂತ್ರಿ, ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಎಂ. ಕಾರಜೋಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಕಲಬುರಗಿ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಜಿಲ್ಲೆಯ ಕೊರೋನಾ ಪರಿಸ್ಥಿತಿ ಅವಲೋಕಿಸಿ ಮಾತನಾಡಿದರು.

ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಾದ ಶ್ರೀ ದತ್ತನ ಕ್ಷೇತ್ರ ದೇವಲ ಗಾಣಗಾಪುರಕ್ಕೆ ಮಹಾರಾಷ್ಟ್ರ ರಾಜ್ಯದಿಂದ ಹೆಚ್ಚಿನ ಭಕ್ತರು ಆಗಮಿಸುತ್ತಾರೆ. ಮಹಾರಾಷ್ಟ್ರದಲ್ಲಿ ಈಗಾಗಲೆ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚಾಗಿ ಕಂಡುಬಂದಿದ್ದರಿಂದ, ಅಲ್ಲಿಂದ ಬರುವ ಭಕ್ತರ ಮೇಲೆ ನಿಗಾ ವಹಿಸುವ ಅವಶ್ಯಕತೆಯಿದೆ. ಅದೇ ರೀತಿಯಲ್ಲಿ ಕಲಬುರಗಿ ನಗರದ ಖಾಜಾ ಬಂದೇ ನವಾಜ್ ದರ್ಗಾಕ್ಕೆ ಆಂಧ್ರಪ್ರದೇಶ, ತೆಲಂಗಾಣಾದಿಂದ ಜನರು ಬರುತ್ತಾರೆ. ಇಲ್ಲಿ ಜನಸಂದಣಿಯಾಗದಂತೆ ನೋಡಿಕೊಳ್ಳಿ ಎಂದರು. 

ಮಾರ್ಚ್ 22 ರಿಂದ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಶ್ರೀಶೈಲ್ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಯುಗಾದಿ ಮಹೋತ್ಸವ ಕಾರ್ಯಕ್ರಮಗಳು ಜರುಗಲಿದ್ದು, ಭಕ್ತಾದಿಗಳಿಗೆ ಅರಿವು ಮೂಡಿಸುವ ಮೂಲಕ ಹೆಚ್ಚಿನ ಜನ ಅಲ್ಲಿಗೆ ಹೋಗದಂತೆ ಮನವರಿಕೆ ಮಾಡಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಒಬ್ಬರು ಜಗತನ್ನು, ಇನ್ನೊಬ್ಬರು ದೇಶವನ್ನು ನಾಶ ಮಾಡುತ್ತಿದ್ದಾರೆ: ಟ್ರಂಪ್, ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗರಂ

ಮುಂದಿನ ಸುದ್ದಿ
Show comments