Video:ಹಾಸನ: ಗಣೇಶ ಮೆರವಣಿಗೆ ಮೇಲೆ ಟ್ರಕ್ ಹರಿದು ದುರಂತಕ್ಕೆ ನಿಜ ಕಾರಣ ಬಯಲು

Krishnaveni K
ಶನಿವಾರ, 13 ಸೆಪ್ಟಂಬರ್ 2025 (08:25 IST)
ಹಾಸನ: ಇಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ನಿನ್ನೆ ರಾತ್ರಿ ಟ್ರಕ್ ಹರಿದು 9 ಜನ ಸಾವನ್ನಪ್ಪಿದ ಭೀಕರ ದುರಂತ ನಡೆದಿದ್ದು ಇದಕ್ಕೆ ನಿಜ ಕಾರಣವೇನೆಂದು ಬಯಲಾಗಿದೆ.

ಹಾಸನದ ಮೊಸಳೆಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ಸಾಗುತ್ತಿದ್ದವರ ಮೇಲೆ ಟ್ರಕ್ ಒಂದು ಹರಿದು 9 ಜನ ಸಾವನ್ನಪ್ಪಿದ್ದು 25 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಡಿಜೆ ಸದ್ದಿಗೆ ಮೈಮರೆತು ಕುಣಿಯುತ್ತಿದ್ದವರ ಮೇಲೆ ಟ್ರಕ್ ಯಮ ಕಂಟಕವಾಗಿ ಪರಿಣಮಿಸಿದೆ.

ಘಟನೆಗೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರು ಆಘಾತ ವ್ಯಕ್ತಪಡಿಸಿದ್ದಾರೆ. ವಿಪರ್ಯಾಸವೆಂದರೆ ಮೃತರ ಪೈಕಿ ಅನೇಕರು ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಯುವಕರಾಗಿದ್ದಾರೆ. ಮನೆ ಮಗನನ್ನು ಕಳೆದುಕೊಂಡು ಆ ಕುಟುಂಬದವರ ಗೋಳು ಹೇಳತೀರದಾಗಿದೆ.

ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ಗಣೇಶ ಮೆರವಣಿಗೆ ಸಾಗಿತ್ತು. ಮೆರವಣಿಗೆ ನಿಮಿತ್ತ ಒಂದು ಬದಿ ಬಂದ್ ಮಾಡಿದ್ದರಿಂದ ಇನ್ನೊಂದು ಬದಿಯಲ್ಲಿ ದ್ವಿಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು ಮತ್ತು ಬ್ಯಾರಿಕೇಡ್ ಗಳನ್ನೂ ಹಾಕಲಾಗಿತ್ತು.

ಈ ವೇಳೆ ಹಾಸನದಿಂದ ಹೊಳೆನರಸೀಪುರಕ್ಕೆ ಟ್ರಕ್ ಮೊದಲು ಬೈಕ್ ಗೆ ಢಿಕ್ಕಿ ಹೊಡೆದು ಬಳಿಕ ಬ್ಯಾರಿಕೇಡ್ ಗೆ ಗುದ್ದಿಕೊಂಡು ಸೀದಾ ಮೆರವಣಿಗೆ ಸಾಗುತ್ತಿದ್ದವರ ಮೇಲೆ ಹರಿದಿತ್ತು. ಚಾಲಕನ ಅಜಾಗರೂಕ ಚಾಲನೆ ಮತ್ತು ಅತಿಯಾದ ವೇಗವೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ಬಹಿರಂಗವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments