Webdunia - Bharat's app for daily news and videos

Install App

ಫೇಸ್ ಬುಕ್ ನಲ್ಲಿನ ವಿಡಿಯೋ ಮಾನಸಿಕ ಅಸ್ವಸ್ಥನನ್ನು ಮನೆಗೆ ಸೇರಿಸಿತು!

Webdunia
ಭಾನುವಾರ, 7 ಅಕ್ಟೋಬರ್ 2018 (17:15 IST)
ಫೇಸ್ ಬುಕ್ ನಲ್ಲಿ ಹಾಕಿದ ವಿಡಿಯೋ ಮೂಲಕ ಐದು ವರ್ಷಗಳಿಂದ ಕುಟುಂಬದಿಂದ ದೂರ ಇದ್ದ ಮಾನಸಿಕ ಅಸ್ವಸ್ಥನೊಬ್ಬ ಮರಳಿ ಕುಟುಂಬ ಸೇರಿದ ಮನ ಮಿಡಿಯುವ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆ ಇಳಕಲ್ ನಗರದಲ್ಲಿ ಈ ಘಟನೆ ನಡೆದಿದೆ. ಇಳಕಲ್ ಜೋಗಿ ಎಂದೇ ಹೆಸರಾಗಿದ್ದ ನರಸಿಂಹ ಎಂಬ ಮಾನಸಿಕ ಅಸ್ವಸ್ಥನನ್ನು ಸಾಮಾಜಿಕ ಜಾಲತಾಣದ ವೈರಲ್ ವಿಡಿಯೋ ಮೂಲಕ ಗಮನಿಸಿದ  ಕುಟುಂಬಸ್ಥರು ಮನೆಗೆ ಕರೆದೊಯ್ದಿದ್ದಾರೆ. ತಲೆ ತುಂಬ ಕೂದಲು ಬಿಟ್ಟುಕೊಂಡು ಹುಚ್ಚನಾಗಿದ್ದ ನರಸಿಂಹನನ್ನು ಎಲ್ಲರೂ ಇಳಕಲ್  ಜೋಗಿ ಎಂದೇ ಕರೆಯುತ್ತಿದ್ದರು. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕಿನ ಗೋವಿನಕೋವಿ ಗ್ರಾಮದ ನರಸಿಂಹ
ಕಳೆದ ಐದು ವರ್ಷದಿಂದ ನಾಪತ್ತೆಯಾಗಿದ್ದ.

ಮನೆಯವರೆಲ್ಲರೂ ಹುಡುಕಿ ಸುಸ್ತಾಗಿದ್ದರು. ಇನ್ನು ಮಾನಸಿಕ ಅಸ್ವಸ್ಥನಾಗಿದ್ದರೂ ನರಸಿಂಹ  ಇಳಕಲ್ ನಗರದಲ್ಲಿ ಸರ್ವವಿಜಯ ಸಂಸ್ಥೆಯವರು ನೆಟ್ಟ ನೂರಾರು ಗಿಡಗಳಿಗೆ ಪ್ರತಿ ನಿತ್ಯ ತಪ್ಪದೇ ಬಕೆಟ್ ಹಿಡಿದು ನೀರು ಹಾಕುತ್ತಿದ್ದ. ಮಾನಸಿಕ ಅಸ್ವಸ್ಥನಾಗಿದ್ದರೂ ಈತನ ಗಿಡದ ಮೇಲಿನ ಪ್ರೀತಿ ಎಲ್ಲರ ಮನಮಿಡಿಯುವಂತೆ ಮಾಡಿತ್ತು. ಕೊನೆಗೆ ಗಿಡಕ್ಕೆ ನೀರು ಹಾಕೋದನ್ನು ವಿಡಿಯೋ ಮಾಡಿದ ಸ್ಥಳೀಯರು ಅದಕ್ಕೆ ಒಳಿತು ಮಾಡು ಮನಸಾ ಎಂಬ ಹಾಡನ್ನು ಅಳವಡಿಸಿ ಫೇಸ್ ಬುಕ್ ಗೆ ಅಪ್ ಲೋಡ್ ಮಾಡಿದ್ದರು. ಈ ವಿಡಿಯೋ ಸಾಕಷ್ಟು ಜನರಿಂದ ಶೇರ್ ಲೈಕ್ ಕಮೆಂಟ್ ಪಡೆಯುತ್ತಾ ನರಸಿಂಹನ ಕುಟುಂಬದ ಗಮನಕ್ಕೂ ಬಂದಿದೆ. ಕೂಡಲೆ ಕುಟುಂಬಸ್ಥರು ಇಳಕಲ್ ನಗರಕ್ಕೆ ಭೇಟಿ ನೀಡಿದ್ದಾರೆ. ಆಗ ಸ್ಥಳೀಯರು   ತಲೆ ತುಂಬ ಕೂದಲು ಬಿಟ್ಟಿದ್ದ ಆತನ‌ ಕ್ಷೌರ ಮಾಡಿಸಿ ಆತನನ್ನು ಸ್ನಾನ‌ಮಾಡಿಸಿ ಹೊಸ ಟಿ ಶರ್ಟ್ ಹಾಕಿಸಿ ಮನೆಗೆ ಕಳಿಸಿ ಕೊಟ್ಟಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments