Webdunia - Bharat's app for daily news and videos

Install App

ವಿಡಿಯೋ ರೆಕಾರ್ಡ್ ತಪ್ಪೊಪ್ಪಿಗೆ

Webdunia
ಗುರುವಾರ, 3 ನವೆಂಬರ್ 2022 (15:05 IST)
ಬಂಡೆಮಠದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಕೇಸ್​​ ಸಂಬಂಧ ಇಂದು ಆರೋಪಿಯನ್ನ ಪೊಲೀಸರು ಸ್ಥಳ ಮಹಜರಿಗೆ ಕರೆತಂದ್ರು. A1 ಆರೋಪಿ ಕಣ್ಣೂರು ಮಠದ ಡಾ.ಮೃತ್ಯುಂಜಯ ಸ್ವಾಮೀಜಿಯನ್ನ ಕರೆತಂದ ಖಾಕಿ ಪಡೆ, ಕಣ್ಣೂರು ಮಠದಲ್ಲಿ ಸ್ಥಳ ಮಹಜರು ನಡೆಸಿದ್ರು. ಮಾಗಡಿ ಇನ್ಸ್‌ಪೆಕ್ಟರ್ ರವಿ ನೇತೃತ್ವದಲ್ಲಿ ಸ್ಥಳ ಮಹಜರು ಮಾಡಲಾಯಿತು. A2 ಆರೋಪಿ ನೀಲಾಂಬಿಕೆಯನ್ನು ದೊಡ್ಡಬಳ್ಳಾಪುರಕ್ಕೆ ಕರೆದೊಯ್ದು ಆಕೆಯ ನಿವಾಸದಲ್ಲಿ ಸ್ಥಳ ಮಹಜರು ಮಾಡಲಾಯಿತು. A3 ಆರೋಪಿ ಮಹದೇವಯ್ಯನನ್ನ ತುಮಕೂರಿಗೆ ಕರೆದೊಯ್ದು ಸ್ಥಳ ಮಹಜರು ನಡೆಸಲಾಯಿತು. ಪೊಲೀಸರ ಮುಂದೆ ಕಣ್ಣೂರು ಶ್ರೀ ತಪ್ಪೊಪ್ಪಿಕೊಂಡಿದ್ದಾರೆ. ವಿಡಿಯೋ ಮಾಡಿದ್ದು ತಪ್ಪಾಯ್ತು ಎಂದು ಹೇಳಿದ್ದು, ಬೇರೆ ಸ್ವಾಮೀಜಿಗಳನ್ನ ಟಾರ್ಗೆಟ್‌ ಮಾಡಿಲ್ಲ ಅಂತ ಡ್ರಾಮಾ ಮಾಡಿದ್ದಾರೆ. ಆರೋಪಿ ನೀಲಾಂಬಿಕೆ ಅರೆಸ್ಟ್‌ಗೂ ಮುನ್ನ ಮೊಬೈಲ್‌ನಲ್ಲಿದ್ದ ಡಾಟಾವನ್ನು ಡಿಲೀಟ್​​ ಮಾಡಿದ್ದಾಳೆ. ಹಳೇ ಫೋನ್‌ ಬಚ್ಚಿಟ್ಟು ಅಮಾಯಕಳಂತೆ ಹನಿ ಲೇಡಿ ನಟನೆ ಮಾಡಿದ್ದಾಳೆ. ಮಠದಿಂದಲೇ ಯುವತಿ ಸ್ವಾಮೀಜಿಗೆ ವಿಡಿಯೋ ಕಾಲ್‌ ಮಾಡಿದ್ಲು ಎಂಬುದು ತನಿಖೆ ವೇಳೆ ತಿಳಿದು ಬಂದಿದೆ. ಮೂವರು ಆರೋಪಿಗಳನ್ನು ಪೊಲೀಸರು ಪ್ರತ್ಯೇಕವಾಗಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣ ಜನಿಸಿದ ಜೈಲು ಈಗಲೂ ಇದೆಯೇ, ಅಷ್ಠಮಿ ದಿನ ಪವಿತ್ರ ಸ್ಥಳ ಕಣ್ತುಂಬಿಕೊಳ್ಳಿ: ಇಲ್ಲಿದೆ ನೋಡಿ Video

ಛೇ.. ಎಂಥಾ ಮಗಳು ಇವಳು.. ಆಸ್ತಿ ಆಸೆಗೆ ಆಸ್ಪತ್ರೆಯಲ್ಲಿರುವ ತಂದೆ ಕೈಯಲ್ಲೇ ಇಂಥಾ ಕೆಲಸ ಮಾಡಿಸೋದಾ Video

ಕೆಆರ್ ಮಾರುಕಟ್ಟೆಗೆ ಸರಕು ವಾಹನ ಎಂಟ್ರಿಗೂ ಇನ್ನು ಶುಲ್ಕ: ಜನರ ಮೇಲೆ ಮತ್ತೊಂದು ಬರೆ

ಶ್ರೀಕೃಷ್ಣ ಜನ್ಮಾಷ್ಠಮಿ ದಿನದಂದೇ ಮಗು ಜನಿಸಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿಗಳು ಮಾಡಿದ್ದೇನು ಗೊತ್ತಾ Video

ಕುಮಟಾದ ಕಡಲ ತೀರದಲ್ಲಿ ಮೀನುಗಾರರ ದೋಣಿ ನಡುವೆ ಭೀಕರ ಅಪಘಾತ: Viral video

ಮುಂದಿನ ಸುದ್ದಿ
Show comments