Select Your Language

Notifications

webdunia
webdunia
webdunia
webdunia

ರಾತ್ರೋ ರಾತ್ರಿ ಆಸ್ಪತ್ರೆಯಿಂದ ವಿದ್ವತ್ ಡಿಸ್ಚಾರ್ಜ್ ಮಾಡಿದ್ದೇಕೆ?!

ಮೊಹಮ್ಮದ್ ನಲಪಾಡ್
ಬೆಂಗಳೂರು , ಸೋಮವಾರ, 5 ಮಾರ್ಚ್ 2018 (09:12 IST)
ಬೆಂಗಳೂರು: ಖಾಸಗಿ ರೆಸ್ಟೋರೆಂಟ್ ನಲ್ಲಿ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತು ಗ್ಯಾಂಗ್ ನಿಂದ ಹಲ್ಲೆಗೊಳಗಾಗಿ ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದ ವಿದ್ವತ್ ನಿನ್ನೆ ಮಧ್ಯರಾತ್ರಿ ಡಿಸ್ಚಾರ್ಜ್ ಆಗಿ ತೆರಳಿದ್ದಾರೆ.

ವಿದ್ವತ್ ಚೇತರಿಸಿಕೊಂಡಿದ್ದು ಡಿಸ್ಚಾರ್ಜ್ ಆಗಬಹುದು ಎಂದು ಘೋಷಿಸಿದ್ದರೂ ಡಿಸ್ಚಾರ್ಜ್ ಆಗದೇ ಆಸ್ಪತ್ರೆಯಲ್ಲಿ ಉಳಿದುಕೊಂಡಿದ್ದರ ಬಗ್ಗೆ ತೀವ್ರ ಚರ್ಚೆಯಾಗಿತ್ತು. ಇದೀಗ ನಿನ್ನೆ ಮಧ್ಯರಾತ್ರಿ ಇದ್ದಕ್ಕಿದ್ದ ಹಾಗೆ ವಿದ್ವತ್ ಮಲ್ಯ ಆಸ್ಪತ್ರೆಯಿಂದ ಬಿಡುಗಡೆಯಾಗಿ ತೆರಳಿದ್ದಾರೆ.

ಕಳೆದ 15 ದಿನಗಳಿಂದ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೊನ್ನೆಯಷ್ಟೇ ತನಿಖಾಧಿಕಾರಿಗಳಿಗೆ ತಮ್ಮ ಹೇಳಿಕೆ ನೀಡಿದ್ದರು. ಇದೀಗ ರಾತ್ರಿ ಇದ್ದಕ್ಕಿದ್ದ ಹಾಗೆ ಡಿಸ್ಚಾರ್ಜ್ ಆಗಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಈ ನಡುವೆ ಇಂದು ಮೊಹಮ್ಮದ್ ನಲಪಾಡ್ ಪರ ವಕೀಲರು ಹೈ ಕೋರ್ಟ್ ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

‘ಬರೆದಿಟ್ಕೊಳ್ಳಿ.. ಮುಂದಿನ ಬಾರಿ ಮೋದಿ ಪ್ರಧಾನಿಯಾಗಲ್ಲ..’