Webdunia - Bharat's app for daily news and videos

Install App

ಅಬ್ಬಿ ಜಲಪಾತ ವೀಕ್ಷಣೆಗೆ ಅವಕಾಶ

Webdunia
ಶುಕ್ರವಾರ, 28 ಸೆಪ್ಟಂಬರ್ 2018 (15:09 IST)
ಪ್ರಕೃತಿ ಸೌಂದರ್ಯದ ನೆಲೆ ಬೀಡಾಗಿದ್ದ ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ಮುನಿಸಿಕೊಂಡ ಪರಿಣಾಮ ಜಲ ಪ್ರಳಯವೇ ಉಂಟಾಗಿತ್ತು. ಇದರಿಂದ ಸಾಕಷ್ಟು ಆಸ್ತಿ ಪಾಸ್ತಿ ನಷ್ಟ ಉಂಟಾಗಿ ರಸ್ತೆ ಸಂಪರ್ಕಗಳು ಸಂಪರ್ಕ ಕಡಿತಗೊಂಡಿದ್ದವು. ಮುನ್ನೆಚ್ಚರಿಕೆ ಕ್ರಮವಾಗಿ ಒಂದು ತಿಂಗಳ ಕಾಲ ಜಿಲ್ಲಾಡಳಿತ ಪ್ರವಾಸಿಗರಿಗೆ ನಿರ್ಬಂಧ ಹೇರಿತ್ತು. ಅಧಿಕಾರಿಗಳ ಶ್ರಮದಿಂದ ತಾತ್ಕಾಲಿಕ ಸಂಪರ್ಕಗಳ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಪ್ರವಾಸಿಗರಿಗೆ ಜಿಲ್ಲಾಡಳಿತ ಅವಕಾಶ  ಕಲ್ಪಿಸಿದೆ.

ಕೊಡಗು ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಮಡಿಕೇರಿ ತಾಲೂಕಿನ ಅಬ್ಬಿ ಜಲಪಾತ, ಮಾಂದಲ್‍ಪಟ್ಟಿ ಮತ್ತು ತಡಿಯಂಡಮೋಳ್ ಪ್ರವಾಸಿ ತಾಣಗಳಿಗಳತ್ತ ಭೇಟಿ ನೀಡುತ್ತಿದ್ದಾರೆ. ಆ ಮೂಲಕ ಪ್ರಕೃತಿ ಸೌಂದರ್ಯವನ್ನು ವೀಕ್ಷಣೆ ಮಾಡುತ್ತಿದ್ದಾರೆ.  

ಲಘು ವಾಹನ ಸಂಚಾರ ಯೋಗ್ಯ ರಸ್ತೆಯನ್ನು ನಿರ್ಮಿಸಲಾಗಿದೆ. ಆದುದರಿಂದ ಅಬ್ಬಿ ಜಲಪಾತ ವೀಕ್ಷಣೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರು ಲಘು ವಾಹನಗಳ ಮೂಲಕ ತೆರಳಬಹುದು. ಪ್ರವಾಸಿಗರು ಜಿಲ್ಲಾಡಳಿತ ನೀಡುವ ಸೂಚನೆಗಳನ್ನು ಪಾಲಿಸುವ ಮೂಲಕ ಸಹಕರಿಸಬೇಕಾಗಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments