Select Your Language

Notifications

webdunia
webdunia
webdunia
webdunia

ದಾನಮ್ಮ ಹತ್ಯೆ ಪ್ರತಿಭಟಿಸಿ ವಿಜಯಪುರ ಬಂದ್

ದಾನಮ್ಮ ಹತ್ಯೆ ಪ್ರತಿಭಟಿಸಿ ವಿಜಯಪುರ ಬಂದ್
ವಿಜಯಪುರ , ಶನಿವಾರ, 23 ಡಿಸೆಂಬರ್ 2017 (09:19 IST)
ವಿಜಯಪುರ: ದಲಿತ ಬಾಲಕಿ ದಾನಮ್ಮ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಘಟನೆಯನ್ನು ಪ್ರತಿಭಟಿಸಿ ಇಂದು ವಿವಿಧ ಸಂಘಟನೆಗಳು ವಿಜಯಪುರ ಬಂದ್ ಗೆ ಕರೆ ನೀಡಿದ್ದು, ಬಿಜೆಪಿ ಕೂಡಾ ಬೆಂಬಲ ವ್ಯಕ್ತಪಡಿಸಿದೆ.
 

ಇಂದು ವಿಜಯಪುರದಲ್ಲಿ ಬಂದ್ ಆಚರಿಸಲಾಗುತ್ತಿದ್ದು, ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.

ವಿಜಯಪುರ ಸಂಪೂರ್ಣ ಬಂದ್ ವಾತಾವರಣವಿದ್ದು, ಬಸ್ ಸಂಚಾರ ಸ್ಥಗಿತಗೊಂಡಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಈ ನಡುವೆ ನಾಲ್ವರು ಆರೋಪಿಗಳನ್ನು ಬಂಧಿಸಿ ಸಿಐಡಿ ವಶಕ್ಕೊಪ್ಪಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಗುಜರಾತನಲ್ಲಿ ರಾಹುಲ್ ಗಾಂಧಿ ಮೂರು ದಿನಗಳ ಪ್ರವಾಸ