Webdunia - Bharat's app for daily news and videos

Install App

ವಿಜಯಪುರದಲ್ಲಿ ಜನರಿಗೆ ವಕ್ಫ್ ನೋಟಿಸ್ ಆತಂಕ: ಸಚಿವ ಎಂಬಿ ಪಾಟೀಲ್ ಗೆ ತೇಜಸ್ವಿ ಸೂರ್ಯ ತಪರಾಕಿ

Krishnaveni K
ಸೋಮವಾರ, 21 ಅಕ್ಟೋಬರ್ 2024 (09:48 IST)
ಬೆಂಗಳೂರು: ವಿಜಯಪುರದಲ್ಲಿ ವಕ್ಫ್ ಬೋರ್ಡ್ ಆಸ್ತಿ ನೋಟಿಸ್ ಬಗ್ಗೆ ಜನ ಆತಂಕಗೊಂಡಿದ್ದು ಸಚಿವ ಎಂಬಿ ಪಾಟೀಲ್ ವಿರುದ್ಧ ಬಿಜೆಪಿ ಎಂಪಿ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ.

ವಕ್ಫ್ ಆಸ್ತಿ ಎಂದು ನೋಟಿಸ್ ಬಂದರೆ ಆತಂಕ ಬೇಡ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದರು. ವಕ್ಫ್ ಬೋರ್ಡ್ ನಿಂದ ತಿಕೋಟಾ ಜಿಲ್ಲೆಯ ಕೆಲವು ಗ್ರಾಮಗಳಿಗೆ ಮಾತ್ರ ನೋಟಿಸ್ ಬಂದಿದೆ. ನೋಟಿಸ್ ಬಂದ ಮಾತ್ರಕ್ಕೆ ಆತಂಕ ಬೇಡ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದರು.

ಎಂಪಿ ಪಾಟೀಲ್ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಂಸದ ತೇಜಸ್ವಿ ಸೂರ್ಯ, ವಕ್ಫ್ ಬೋರ್ಡ್ ಅತಿಕ್ರಮಣ ಮತ್ತು ಉದ್ಧಟತನಕ್ಕೆ ಉದಾಹರಣೆ ಇದು. ವಕ್ಫ್ ಆಸ್ತಿ ನೋಟಿಸ್ ವಿಚಾರಕ್ಕೆ ಮಾನ್ಯ ಸಚಿವರಿಗೆ ತಿಕೋಟಾ ಜಿಲ್ಲೆಯ ಕೆಲವು ಗ್ರಾಮಗಳಿಗೆ ನೋಟಿಸ್ ಬಂದಿರುವುದು ಮಾತ್ರ ಗಮನಕ್ಕೆ ಬಂದಿದೆ. ಆದರೆ ಜಿಲ್ಲೆಯ 211 ಗ್ರಾಮ ಪಂಚಾಯಿತಿಗಳ ರೈತರು, ಸಾರ್ವಜನಿಕರ ಗೋಳು ಕೂಡಾ ಇದೇ ಆಗಿದೆ ಎಂದಿದ್ದಾರೆ.

ವಿಜಯಪುರದಲ್ಲಿ 10 ಸಾವಿರ ಎಕರೆ ತಮ್ಮದು ಎಂದು ವಕ್ಫ್ ಬೋರ್ಡ್ ಹೇಳುತ್ತಿದೆ. ಇದರ ಸರ್ವೇ ಮಾಡಲು ಸಚಿವ ಜಮೀರ್ ಅಹ್ಮದ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಮೊನ್ನೆಯಷ್ಟೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments