Select Your Language

Notifications

webdunia
webdunia
webdunia
webdunia

ಕೇಂದ್ರ ಒಪ್ಪಿಕೊಂಡರೆ ರೈತರ ಸಾಲ ಮನ್ನಾ ಮಾಡಲು ಸಿದ್ಧ: ಕೃಷ್ಣ ಭೈರೇಗೌಡ

ರಾಜ್ಯ ಸರಕಾರ
ವಿಜಯಪುರ , ಬುಧವಾರ, 21 ಸೆಪ್ಟಂಬರ್ 2016 (10:01 IST)
ಕಳೆದ ಎರಡು ವರ್ಷಗಳಿಂದ ಮಳೆಯಿಲ್ಲದೇ ರಾಜ್ಯದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರೈತರ ಸಾಲ ಮನ್ನಾ ಮಾಡುವಂತೆ ಸಲ್ಲಿಸಿದ ಮನವಿಗೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಕೃಷ್ಣ ಭೈರೇಗೌಡ, ಕೇಂದ್ರ ಸರಕಾರ ಒಪ್ಪಿಕೊಂಡರೆ ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡಲು ಸಿದ್ಧವಿದೆ ಎಂದು ಸ್ಪಷ್ಟಪಡಿಸಿದರು. 
 
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಭಾಗ್ಯ ಯೋಜನೆಯನ್ನು ರಾಷ್ಟ್ರೀಯ ಕಾರ್ಯಕ್ರಮವಾಗಿ ಅನುಷ್ಠಾನಗೊಳಿಸಲು ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು
 
ರಾಜ್ಯ ಸರಕಾರ ಜಾರಿಗೊಳಿಸಿರುವ ಕೃಷಿಭಾಗ್ಯ, ಕೃಷಿ ಹೊಂಡ ಕಾರ್ಯಕ್ರಮಗಳು ರಾಷ್ಟ್ರೀಯ ಗಮನ ಸೆಳೆದಿದೆ ಎಂದು ಹೇಳಿದರು. 
 
ಈ ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ಅನುಷ್ಠಾನಗೊಳಿಸುವ ಒಲವು ತೋರಿಸಿದ್ದಾರೆ. ಈ ಕುರಿತಂತೆ ಕೇಂದ್ರ ಸರಕಾರಕ್ಕೆ ಯೋಜನೆಯ ಅಗತ್ಯ ಹಾಗೂ ಉಪಯೋಗ ಕುರಿತಂತೆ ಮನವಿ ಮಾಡಿಕೊಡುವುದರ ಮೂಲಕ ಕೇಂದ್ರದ ಅನುದಾನದೊಂದಿಗೆ ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕೃಷಿಭಾಗ್ಯ ಯೋಜನೆ ಅನುಷ್ಠಾನಗೊಳಿಸಲು ಚಿಂತನೆ ನಡೆದಿದೆ ಎಂದು  ಹೇಳಿದರು. 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .

Share this Story:

Follow Webdunia kannada

ಮುಂದಿನ ಸುದ್ದಿ

ಮಗುವಿಗೆ ಜನ್ಮ ನೀಡಿದ ಬಾಲಕಿ