Webdunia - Bharat's app for daily news and videos

Install App

ಕೇಂದ್ರ ಒಪ್ಪಿಕೊಂಡರೆ ರೈತರ ಸಾಲ ಮನ್ನಾ ಮಾಡಲು ಸಿದ್ಧ: ಕೃಷ್ಣ ಭೈರೇಗೌಡ

Webdunia
ಬುಧವಾರ, 21 ಸೆಪ್ಟಂಬರ್ 2016 (10:01 IST)
ಕಳೆದ ಎರಡು ವರ್ಷಗಳಿಂದ ಮಳೆಯಿಲ್ಲದೇ ರಾಜ್ಯದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ರೈತರ ಸಾಲ ಮನ್ನಾ ಮಾಡುವಂತೆ ಸಲ್ಲಿಸಿದ ಮನವಿಗೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಕೃಷ್ಣ ಭೈರೇಗೌಡ, ಕೇಂದ್ರ ಸರಕಾರ ಒಪ್ಪಿಕೊಂಡರೆ ರಾಜ್ಯ ಸರಕಾರ ರೈತರ ಸಾಲ ಮನ್ನಾ ಮಾಡಲು ಸಿದ್ಧವಿದೆ ಎಂದು ಸ್ಪಷ್ಟಪಡಿಸಿದರು. 
 
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಭಾಗ್ಯ ಯೋಜನೆಯನ್ನು ರಾಷ್ಟ್ರೀಯ ಕಾರ್ಯಕ್ರಮವಾಗಿ ಅನುಷ್ಠಾನಗೊಳಿಸಲು ಕೇಂದ್ರ ಸರಕಾರಕ್ಕೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು
 
ರಾಜ್ಯ ಸರಕಾರ ಜಾರಿಗೊಳಿಸಿರುವ ಕೃಷಿಭಾಗ್ಯ, ಕೃಷಿ ಹೊಂಡ ಕಾರ್ಯಕ್ರಮಗಳು ರಾಷ್ಟ್ರೀಯ ಗಮನ ಸೆಳೆದಿದೆ ಎಂದು ಹೇಳಿದರು. 
 
ಈ ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ಅನುಷ್ಠಾನಗೊಳಿಸುವ ಒಲವು ತೋರಿಸಿದ್ದಾರೆ. ಈ ಕುರಿತಂತೆ ಕೇಂದ್ರ ಸರಕಾರಕ್ಕೆ ಯೋಜನೆಯ ಅಗತ್ಯ ಹಾಗೂ ಉಪಯೋಗ ಕುರಿತಂತೆ ಮನವಿ ಮಾಡಿಕೊಡುವುದರ ಮೂಲಕ ಕೇಂದ್ರದ ಅನುದಾನದೊಂದಿಗೆ ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಕೃಷಿಭಾಗ್ಯ ಯೋಜನೆ ಅನುಷ್ಠಾನಗೊಳಿಸಲು ಚಿಂತನೆ ನಡೆದಿದೆ ಎಂದು  ಹೇಳಿದರು. 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments