Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

Webdunia
ಬುಧವಾರ, 24 ಮೇ 2023 (20:53 IST)
ಕಾಂಗ್ರೆಸ್‌ನವರಿಗೆ ಜ್ಞಾನೋದಯ ಆಗಿದೆ.ಅದಕ್ಕೆ ನಾನು ಧನ್ಯವಾದ ಹೇಳ್ತೀನಿ.ನಿನ್ನೆ ಡಿಸಿಎಂ ಸಾಹೇಬ್ರು ಪೊಲೀಸರಿಗೆ ತರಾಟೆಗೆ ತೆಗೆದುಕೊಂಡಿದಾರೆ.ಕೇಸರೀಕರಣದ ವಿರುದ್ಧವೂ ಮಾತಾಡಿದಾರೆ.ರಾಷ್ಟ್ರದ ಧ್ಚಜದಲ್ಲಿ‌ ಕೇಸರಿ ಬಣ್ಣ ಇದೆ, ಸ್ವಾಮೀಜಿ ಗಳ‌ ಉಡುಗೆ ಕೇಸರಿ, ಹನುಮ ಧ್ವಜದ ಬಣ್ಣ ಕೇಸರಿ.ಇಂಥ ಕೇಸರಿ ಬಗ್ಗೆ ಕಾಂಗ್ರೆಸ್ ನವ್ರಿಗೆ ಯಾಕೆ ಸಿಟ್ಟು‌ಗೊತ್ತಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಿಜಯೇಂದ್ರ ಕಿಡಿಕಾರಿದ್ದಾರೆ.
 
ಇಡೀ ದೇಶದಲ್ಲೇ ಅಧಿಕಾರಕ್ಕೆ ಬಂದಿದೀವಿ ಅನ್ನೋ ಭ್ರಮೆಯಲ್ಲಿ ಕಾಂಗ್ರೆಸ್‌ನವರು ಇದಾರೆ.ಇಂತಹ ಭ್ರಮೆಯಲ್ಲಿದ್ದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜನ ಅವರಿಗೆ ತಮ್ಮ ಪಾಠ ಕಲಿಸ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ರಾಜ್ಯದ ಸಿಎಂ ಐದು ವರ್ಷ ಇರ್ತಾರೋ ಇಲ್ವೋ ಅಂತನೇ ಗ್ಯಾರಂಟಿ ಇಲ್ಲ.ಗ್ಯಾರಂಟಿ ಸ್ಕೀಂಗಳ ಬಗ್ಗೆ ಮುಂದಿನ ದಿನಗಳಲ್ಲಿ ರಾಜ್ಯದ ಜನರಿಗೆ ನಿರಾಸೆ ಕಾದಿದೆಯಾ ಅಂತ ಅನುಮಾನ ಬರ್ತಿದೆ.ದಾರೀಲಿ ಹೋಗೋರ ಬಳಿ ಮತ ಕೇಳಿ ಹಾಕಿಸಿಕೊಂಡಿದ್ದಾರೆ.ಆದ್ರೆ ಗ್ಯಾರಂಟಿ ಬೀದೀಲಿ ಹೋಗೋರಿಗೆ ಕೊಡಲ್ಲ ಅಂತಿದಾರೆ.ಈ ಸರ್ಕಾರ ಡಬಲ್ ಸ್ಟೇರಿಂಗ್ ಸರ್ಕಾರ.ಸಿಎಂಗೊಂದು ಸ್ಟೇರಿಂಗ್, ಡಿಸಿಎಂಗೊಂದು ಸ್ಟೇರಿಂಗ್ ,ಯಾರು ಯಾವ ಕಡೆ ಎಳೀತಾರೋ ಗೊತ್ತಿಲ್ಲ.ಯಾರು ಯಾವ ಕಡೆಗೆ ಸ್ಟೇರಿಂಗ್ ತಿರುಗಿಸ್ತಾರೋ‌..? ಬಸ್ ಯಾವ ಕಡೆ ಹೋಗುತ್ತೋ ಕಾದು ನೋಡಬೇಕು.ಇವರಿಗೆ ಆ ದೇವರೇ ಬುದ್ಧಿ ಕಲಿಸ್ತಾರೆ ಎಂದು ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments