Webdunia - Bharat's app for daily news and videos

Install App

ಇಂದು ವಿಜಯೇಂದ್ರ ಪ್ರಮಾಣವಚನ

Webdunia
ಬುಧವಾರ, 15 ನವೆಂಬರ್ 2023 (13:32 IST)
ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣಕ್ಕೂ ಮುನ್ನ ತಮ್ಮ ತಂದೆ ತಾಯಿಯ ಆಶೀರ್ವಾದ ಪಡೆದುಕೊಂಡಿದ್ದಾರೆ.ಕುಟುಂಬ ಸಮೇತರಾಗಿ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ತಂದೆ ಬಿಎಸ್ ಯಡಿಯೂರಪ್ಪ ‌ಅರ್ಶಿವಾದ ಪಡೆದಿಕೊಂಡಿದ್ದಾರೆ. ಇಂದು ನೂತನ 11ನೇ ಬಿಜೆಪಿ ರಾಜ್ಯಾಧ್ಯಕ್ಷ ಆಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಆಯ್ಕೆಯಾಗಿ ಮಿಂಚಿನ ಸಂಚಲನಕ್ಕೆ ಕಾರಣವಾಗಿರುವ ಬಿವೈ ವಿಜಯೇಂದ್ರ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಸಮಾರಂಭ ನಡೆಯುತ್ತಿದೆ. ಗಣಪತಿ ಹೋಮದ ಪೂರ್ಣಾಹುತಿ ನಂತರ ವಿಜಯೇಂದ್ರಗೆ ಹಾಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಇನ್ನು ಮಲ್ಲೇಶ್ವರಂನಲ್ಲಿ ರಸ್ತೆಯುದ್ಧಕ್ಕೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ. ಎಲ್ಲೆಲ್ಲೂ ವಿಜಯೇಂದ್ರ ಪೋಸ್ಟರ್‌ಗಳು ಮಿಂಚುತ್ತಿವೆ. ಅಲ್ಲದೇ ಬಿಜೆಪಿ ಕಚೇರಿ ತಳಿರು ತೋರಣಗಳಿಂದ ಸಿಂಗಾರಗೊಂಡಿದೆ. ಕಮಲಪಾಳಯದಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments