Webdunia - Bharat's app for daily news and videos

Install App

ವಿಕ್ರಂ ಗೌಡ ಎನ್‌ಕೌಂಟರ್ ಬೆನ್ನಲ್ಲೇ ಮತ್ತೋರ್ವ ನಕ್ಸಲ್ ಶರಣಾಗತಿ

Sampriya
ಶನಿವಾರ, 1 ಫೆಬ್ರವರಿ 2025 (16:51 IST)
Photo Courtesy X
ಚಿಕ್ಕಮಗಳೂರು: ಕಳೆದ ಒಂದೂವರೆ ದಶಕದಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರೀಯರಾಗಿದ್ದ ಶೃಂಗೇರಿ ತಾಲೂಕಿನ ಕೋಟೆಹೊಂಡ ಗ್ರಾಮದ ರವೀಂದ್ರ ಇಂದು ಪೊಲೀಸರ ಮುಂದೆ ಶರಣಾಗಿದ್ದಾನೆ. ಈ ಮೂಲಕ ಸರ್ಕಾರ ಪ್ಯಾಕೇಜ್‌ಗೆ ಒಪ್ಪಿಗೆ ಸೂಚಿಸಿ, ಮುಖ್ಯವಾಹಿನಿ ಬರಲು ನಿರ್ಧರಿಸಿದ್ದಾನೆ. ‌

ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಶನಿವಾರ ಮಧ್ಯಾಹ್ನ ನಾಗರಿಕ ಶಾಂತಿಗಾಗಿ ವೇದಿಕೆಯ ಸದಸ್ಯರ ಜೊತೆ ಆಗಮಿಸಿದ ರವೀಂದ್ರ ನಕ್ಸಲ್ ಪುರ್ನವಸತಿ ಮತ್ತು ಶರಣಾಗತಿ ಸಮಿತಿ ಜಿಲ್ಲಾ ಅಧ್ಯಕ್ಷೆಯೂ ಆಗಿರುವ ಚಿಕ್ಕಮಗಳೂರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್, ಶರಣಾಗತಿ ಸಮಿತಿಯ ಸದಸ್ಯ ಕೆ.ಪಿ.ಶ್ರೀಪಾಲ್, ನೂರ್ ಶ್ರೀಧರ್ ಸೇರಿದಂತೆ ಇತರರ ಮುಂದೆ ರವೀಂದ್ರ ಶರಣಾಗಿದ್ದಾರೆ.

ಈ ವೇಳೆ ಮಾತನಾಡಿದ ರವೀಂದ್ರ, ನಾನು ಸ್ವ ಇಚ್ಚೆಯಿಂದ ಸಮಾಜದ ಮುಖ್ಯವಾಹಿನಿಗೆ ಬಂದಿದ್ದೇನೆ. ಯಾರ ಒತ್ತಡದಿಂದ ಬಂದಿಲ್ಲ, ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸರ್ಕಾರದ ಮುಂದೆ ಮನವಿ ಮಾಡಿದ್ದಾನೆ.

ಕಳೆದ ಒಂದೂವರೆ ದಶಕದಿಂದ ಭೂಗತನಾಗಿದ್ದ ರವೀಂದ್ರ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಇವರ ವಿರುದ್ಧ ಜಿಲ್ಲೆಯಲ್ಲಿ ಮೇಲೆ 14 ಕೇಸ್ ಗಳಿವೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments