Webdunia - Bharat's app for daily news and videos

Install App

ಸಚಿವ ರಮಾನಾಥ ರೈ ಪುತ್ರನಿಗೆ ಬಾರಕೋಲಿನಿಂದ ಬಾರಿಸಿದ ಗ್ರಾಮಸ್ಥರು

Webdunia
ಸೋಮವಾರ, 25 ಜುಲೈ 2016 (14:45 IST)
ರಾಜ್ಯ ಅರಣ್ಯ ಹಾಗೂ ಪರಿಸರ ಖಾತೆ ಸಚಿವರ ರಮಾನಾಥ ರೈ ಅವರ ಪುತ್ರ ದೀಪು ರೈ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೋರಿ ಪುಂಡಾಟಿಕೆ ಮೆರೆದ ಘಟನೆ ಕೊಡಗಿನ ಶ್ರೀಮಂಗಲಂ ಸಮೀಪದ ಟಿ.ಶೆಟ್ಟಿಗೇರಿಯಲ್ಲಿ ವರದಿಯಾಗಿದೆ.
 
ಮಾಜಿ ಗ್ರಾಮ ಪಂಚಾಯತ ಸದಸ್ಯರ ಮನೆ ಮುಂದೆ ಕಾರು ನಿಲ್ಲಿಸಿ, ಗೆಳೆಯರೊಡನೆ ಎಣ್ಣೆ ಪಾರ್ಟಿ ಮಾಡುತ್ತಿದ್ದ ರಾಜ್ಯ ಅರಣ್ಯ ಹಾಗೂ ಪರಿಸರ ಖಾತೆ ಸಚಿವರ ರಮಾನಾಥ ರೈ ಅವರ ಪುತ್ರ ದೀಪು ರೈ, ಅನುಚಿತ ವರ್ತನೆ ತೋರಿ ಪುಂಡಾಟಿಕೆ ಮೆರೆದಿದ್ದಾರೆ ಎಂದು ಹೇಳಲಾಗುತ್ತಿದೆ.
 
ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೋರಿ ಪುಂಡಾಟಿಕೆ ಮೇರೆದಿರುವುದನ್ನು ಪ್ರಶ್ನಿಸಿದ ಸ್ಥಳೀಯರಿಗೆ ನಾನು ಮಂತ್ರಿ ಮಗ ನಿಮ್ಮನ್ನೆಲ್ಲಾ ಜೈಲಿಗೆ ಕಳುಹಿಸುತ್ತೇನೆ ಎಂದು ಧಮ್ಕಿ ಹಾಕಿದ್ದಲ್ಲದೆ, ಸ್ನೇಹಿತರೊಂದಿಗೆ ಸ್ಥಳೀಯರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಆಕ್ರೋಶಗೊಂಡ ಸ್ಥಳಿಯರು ಮಂತ್ರಿ ಪುತ್ರನನ್ನು ಬಾರಕೋಲಿನಿಂದ ಬಾರಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
 
ಪುಂಡಾಟಿಕೆ ಮೆರೆದ ಮಂತ್ರಿ ಪುತ್ರನಿಗೆ ಪೊಲೀಸ್‌ ಠಾಣೆಯಲ್ಲಿ ರಾಜಮರ್ಯಾದೆ ನೀಡಿ, ಪ್ರಕರಣ ದಾಖಲಿಸಿಕೊಳ್ಳದ ಪೊಲೀಸರ ವರ್ತನೆಯನ್ನು ಖಂಡಿಸಿ ಸಾರ್ವಜಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments