Webdunia - Bharat's app for daily news and videos

Install App

ಕಲ್ಲು ದೊಣ್ಣೆಗಳಿಂದ ಹೊಡೆದು ಮಾನಸಿಕ ಅಸ್ವಸ್ಥನ ಹತ್ಯೆ

Webdunia
ಮಂಗಳವಾರ, 4 ಆಗಸ್ಟ್ 2015 (09:20 IST)
ವ್ಯಾಪಾರಿಯೊಬ್ಬನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಮಾನಸಿಕ ಅಸ್ವಸ್ಥನನ್ನು ಸಾರ್ವಜನಿಕರು ಕಲ್ಲು ಮತ್ತು ದೊಣ್ಣೆಯಿಂದ ಹೊಡೆದು ಸಾಯಿಸಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
 
ಬಸವಾಪುರ ಎಂಬಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು ರಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
ಮಾರ್ಕೆಟ್‌ನಲ್ಲಿ ಹೂವಿನ ವ್ಯಾಪಾರ ಮಾಡುತ್ತಿದ್ದ ರಾಮಶೆಟ್ಟಿ (45) ಎಂಬಾತನ ಮೇಲೆ ಅಪರಿಚಿತ ಮಾನಸಿಕ ಅಸ್ವಸ್ಥನೊಬ್ಬ ಏಕಾಏಕಿ ದಾಳಿ ನಡೆಸಿ ದೊಣ್ಣೆಯಿಂದ ಹೊಡೆದಿದ್ದಾನೆ. ಪರಿಣಾಮ ರಾಮಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಅದನ್ನು ಕಂಡು ಆಕ್ರೋಶಗೊಂಡ ಸಾರ್ವಜನಿಕರು ಮಾನಸಿಕ ಅಸ್ವಸ್ಥನನ್ನು ಕಟ್ಟಿ ಹಾಕಿ ಜಲ್ಲಿ ಕಲ್ಲು ಮತ್ತು ದೊಣ್ಣೆಯಿಂದ ಮನಬಂದಂತೆ ಥಳಿಸಿದ್ದಾರೆ. ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತ ಯಾರು, ಎಲ್ಲಿಂದ ಬಂದ ಎಂಬುದು ತಿಳಿದು ಬಂದಿಲ್ಲ. 
 
ಗಾಯಗೊಂಡಿರುವ ರಾಮಶೆಟ್ಟಿಯನ್ನು ಕೆ. ಆರ್. ನಗರ ಆಸ್ಪತ್ರೆಗೆ ಸೇರಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments