Webdunia - Bharat's app for daily news and videos

Install App

ಕಸ ವಿಲೇವರಿಗೆ ಗುಂಡಿಗಳನ್ನ ದೂರದ ಜಾಗದಲ್ಲಿ ತೆರೆಯುವಂತೆ ಗ್ರಾಮಸ್ಥರ ಧರಣಿ

Webdunia
ಶನಿವಾರ, 7 ಜನವರಿ 2023 (19:14 IST)
ಚಿಕ್ಕಮಗಳೂರು ಜ.೭ ಕಸದ ವಿಲೇವಾರಿ ಗುಂಡಿಯನ್ನು ಗ್ರಾಮದಿಂದ ದೂರದ ಜಾಗದಲ್ಲಿ ತೆಗೆಯುವಂತೆ ಒತ್ತಾಯಿಸಿ ಹಲಸುಮನೆ ಗ್ರಾಮಸ್ಥರು ತಾಲ್ಲೂಕಿನ ಬಸ್ಕಲ್ ಗ್ರಾಮ ಪಂಚಾಯಿತಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ಗ್ರಾಮ ಪಂಚಾಯಿತಿ ಎದುರು ಜಮಾಯಿಸಿದ ಗ್ರಾಮಸ್ಥರು ಕಸದ ವಿಲೇವಾರಿ ಗುಂಡಿಯನ್ನು ಗ್ರಾಮದ ಮುಂಭಾಗದ ರಸ್ತೆಯಲ್ಲೇ ತೆಗೆಯಲು ಮುಂದಾಗಿರುವುದರ  ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
 
ಗ್ರಾಮದ ಮುಂಭಾಗದ ರಸ್ತೆಯಲ್ಲಿ ಕಸದ ಗುಂಡಿಯನ್ನು ಮಾಡುವುದರಿಂದ ದುರ್ವಾಸನೆ ಬೀರುತ್ತದೆ, ಗ್ರಾಮದಲ್ಲಿ ಸಾಂಕ್ರಾಮಿಕ ರೋಗಗಳು ಹರಡುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.ಗ್ರಾಮದ ಮುಂಭಾಗದಲ್ಲಿ ಗುಂಡಿಯನ್ನು ತೋಡದಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ೩-೪ ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ, ಗ್ರಾಮ ಪಂಚಾಯಿತಿ ರಾತ್ರೋರಾತ್ರಿ ಗುಂಡಿ ತೆಗೆಯುವ ಕಾರ್ಯ ಆರಂಭಿಸಿದೆ ಎಂದು ಆರೋಪಿಸಿದರು.ಗ್ರಾಮದ ಮುಂಭಾಗ ಗುಂಡಿ ತೋಡುವ ಕೆಲಸವನ್ನು ಕೈಬಿಟ್ಟು ಹಳ್ಳಿಯಿಂದ ದೂರದ ಸ್ಥಳದಲ್ಲಿ ನಿರ್ಮಿಸಬೇಕು ಎಂದು ಆಗ್ರಹಿಸಿದರು.ಗ್ರಾಮದ ಮುಖಂಡರಾದ ಅರೇನಳ್ಳಿ ಪ್ರಕಾಶ್, ಪ್ರವೀಣ್, ಲೋಕೇಶ್, ವೇಣು, ಧರ್ಮೇಶ್, ಸುರೇಶ್, ಕಲ್ಲೇಗೌಡ, ರವಿ, ತೀರ್ಥನಾಥ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments