Webdunia - Bharat's app for daily news and videos

Install App

ದೇಶ ಕಾಯುವ ಯೋಧನ ಕುಟುಂಬಕ್ಕೆ ಊರಿಂದ ಬಹಿಷ್ಕಾರ ಹಾಕಿದ ಗ್ರಾಮಸ್ಥರು

Webdunia
ಗುರುವಾರ, 20 ಫೆಬ್ರವರಿ 2020 (11:52 IST)
ಬೆಳಗಾವಿ : ಅಂಗನವಾಡಿ ನಿರ್ಮಿಸೋಕೆ ಜಾಗ ಕೊಡಲಿಲ್ಲ ಎಂಬ ಕಾರಣಕ್ಕೆ ಗ್ರಾಮಸ್ಥರೆಲ್ಲಾ ಸೇರಿ ಯೋಧರೊಬ್ಬರ  ಕುಟುಂಬಕ್ಕೆ ಬಹಿಷ್ಕಾರ ಹಾಕಿದ ಘಟನೆ ಬೆಳಗಾವಿಯ ರಾಮದುರ್ಗದ ತೋಟಗಿಟ್ಟಿ ಗ್ರಾಮದಲ್ಲಿ  ನಡೆದಿದೆ.


ಯೋಧ ವಿಠಲ್ ಎಂಬುವರ ತಂದೆಗೆ ಸೇರಿದ ಜಾಗದಲ್ಲಿ ಊರಿನ ಮುಖಂಡರು ಅಂಗನವಾಡಿ ನಿರ್ಮಿಸಲು ಮುಂದಾಗಿದ್ದರು. ಆದರೆ ಯೋಧನ ಕುಟುಂಬದವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಅವರ ಕುಟುಂಬಕ್ಕೆ ಊರಿಂದ ಬಹಿಷ್ಕಾರ ಹಾಕಿದ್ದಲ್ಲದೇ ಅವರ ಕುಟುಂಬದವರ ಜೊತೆ ಯಾರಾದರೂ ಮಾತನಾಡಿದರೆ ಅವರಿಗೆ 5 ಸಾವಿರ ದಂಡ ವಿಧಿಸಿದ್ದಾರೆ.


ಹಾಗೇ ಊರಿನ ಜಾತ್ರೆ, ದೇಗುಲಕ್ಕೂ ಪ್ರವೇಶಿಸದಂತೆ ನಿಷೇಧ ಹೇರಿದ್ದಾರೆ. ಅಲ್ಲದೇ ಇದೀಗ ಯೋಧ ಮತ್ತು ಆತನ ಸಹೋದರನ ಮದುವೆಗೆ ಗ್ರಾಮಸ್ಥರು ತಡೆಯೊಡುತ್ತಿದ್ದಾರೆ.  ಈ ಬಗ್ಗೆ ಯೋಧ ವಿಠಲ್ ಅವರು ಮಾಧ್ಯಮದವರೊಂದಿಗೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments