Select Your Language

Notifications

webdunia
webdunia
webdunia
webdunia

ಲಾಕ್ ಡೌನ್ ಸಾಮೂಹಿಕ ಪ್ರತಿಜ್ಞೆ ಸ್ವೀಕರಿಸಿದ ಗ್ರಾಮಸ್ಥರು

ಲಾಕ್ ಡೌನ್ ಸಾಮೂಹಿಕ ಪ್ರತಿಜ್ಞೆ ಸ್ವೀಕರಿಸಿದ ಗ್ರಾಮಸ್ಥರು
ಚಿಕ್ಕಬಳ್ಳಾಪುರ , ಬುಧವಾರ, 1 ಏಪ್ರಿಲ್ 2020 (13:54 IST)
ಲಾಕ್ ಡೌನ್ ಪಾಲಿಸುತ್ತೇವೆಂದು ಈ ಊರಿನ ಜನರು ಸಾಮೂಹಿಕವಾಗಿ ಪ್ರತಿಜ್ಞೆ ಸ್ವೀಕರಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾಗತಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಚೊಕ್ಕ ರೆಡ್ಡಿಹಳ್ಳಿ ಗ್ರಾಮದ ಗ್ರಾಮಸ್ಥರು ಬುಧವಾರ ಬೆಳಗ್ಗೆ ಲಾಕ್ ಡೌನ್ ಪಾಲಿಸುತ್ತೇವೆಂದು ಸಾಮೂಹಿಕವಾಗಿ ಪ್ರತಿಜ್ಞೆ ಸ್ವೀಕರಿಸಿದ್ದಾರೆ.

ನಾವು  ಪ್ರತಿ ದಿನ ಒಂದು ಗಂಟೆಗೆ ಒಮ್ಮೆ ಕೈಗಳನ್ನು ಸೋಪು ಅಥವಾ ಸ್ಯಾನಿಟೈಸರ್ ನಿಂದ ತೊಳೆಯುತ್ತೇವೆ ಹಾಗೂ ಒಬ್ಬರಿಗೊಬ್ಬರು ಕನಿಷ್ಠ 1 ಮೀಟರ್ ಸಾಮಾಜಿಕ ಅಂತರವನ್ನು ಕಾಪಾಡುತ್ತೇವೆ. ನಮ್ಮ ಮನೆಗಳ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡುತ್ತೇವೆ ಎಂಬುದಾಗಿ ಪ್ರತಿಜ್ಞೆಯನ್ನು ಮಾಡಿ ಲಾಕ್ ಡೌನ್ ಪಾಲಿಸುವುದಾಗಿ ತಿಳಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಈ ಜಿಲ್ಲೆಯಲ್ಲಿದೆ 300 ಹಾಸಿಗೆಯ ಕೊರೊನಾ ಆಸ್ಪತ್ರೆ