Publish Date: Sat, 02 May 2026 (17:55 IST)
Updated Date: Sat, 02 May 2026 (17:57 IST)
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿ ಜೀವಾವಧಿ ಶಿಕ್ಷೆಗೊಳಗಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ವಿಧಾನಸಭೆ ಸಚಿವಾಲಯ ನೀಡಿರುವ ಈ ಮಹತ್ವದ ಆದೇಶ ಬಿಗ್ ಶಾಕ್ ನೀಡಿದಂತಾಗಿದೆ.
ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾಗಿ ಜೀವಾವಧಿ ಶಿಕ್ಷೆಗೊಳಗಾಗಿರುವ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಧಿಕೃತವಾಗಿ ಅನರ್ಹವಾಗಿದೆ. ಈ ಸಂಬಂಧ ವಿಧಾನಸಭೆ ಸಚಿವಾಲಯ ಮಹತ್ವದ ಆದೇಶ ಹೊರಡಿಸಿದೆ.
ಯಾವುದೇ ಜನಪ್ರತಿನಿಧಿ ಎರಡು ವರ್ಷಕ್ಕಿಂತ ಹೆಚ್ಚಿನ ಅವಧಿಗೆ ಯಾವುದೇ ಅಪರಾಧದಲ್ಲಿ ಜೈಲು ಶಿಕ್ಷೆಗೊಳಗಾದರೆ ಶಾಸಕ ಸ್ಥಾನ ಅನರ್ಹಗೊಳ್ಳುತ್ತದೆ. ಇದೀಗ ವಿನಯ್ ಕುಲಕರ್ಣಿ ಪ್ರಕರಣದಲ್ಲೂ ಇದೇ ರೀತಿ ಮಾಡಲಾಗಿದೆ. ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಕಟವಾಗಿ ಇಷ್ಟು ದಿನಗಳ ನಂತರ ಸಚಿವಾಲಯದಿಂದ ಮಹತ್ವದ ಆದೇಶ ಹೊರಬಿದ್ದಿದೆ.
ವಿನಯ್ ಕುಲಕರ್ಣಿ ಶಾಸಕ ಸ್ಥಾನ ಕಳೆದುಕೊಂಡ ಬೆನ್ನಲ್ಲೇ ಈಗ ಕಾಂಗ್ರೆಸ್ ಸಂಖ್ಯಾಬಲ ಒಂದು ಸ್ಥಾನ ಕುಸಿದಿದೆ. ಸದ್ಯಕ್ಕೆ ವಿನಯ್ ಕುಲಕರ್ಣಿ ತಮಗೆ ನೀಡಲಾಗಿರುವ ಶಿಕ್ಷೆ ವಿರುದ್ಧ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿರುವ ಹೊತ್ತಿನಲ್ಲೇ ಈ ಶಾಕ್ ಎದುರಾಗಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ