Webdunia - Bharat's app for daily news and videos

Install App

ವರದಕ್ಷಿಣೆಗಾಗಿ ಮಹಿಳೆಯ ಮೇಲೆ ದೌರ್ಜನ್ಯ

Webdunia
ಬುಧವಾರ, 13 ಡಿಸೆಂಬರ್ 2017 (14:41 IST)
ವಿಜಯಪುರ: ಜನರು ಜೀವಕ್ಕಿಂತ  ಹಣಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ ಎನ್ನುವುದಕ್ಕೆ ವರದಕ್ಷಿಣೆ ಕಿರುಕುಳಗಳ ಪ್ರಕರಣಗಳೆ ಒಂದು ಸಾಕ್ಷಿ. ಈ ವರದಕ್ಷಿಣೆ ಕಿರುಕುಳಗಳನ್ನು ನಿರ್ಮೂಲನೆ ಮಾಡಲು ಸರ್ಕಾರ  ಅನೇಕ ಕಾನೂನುಗಳನ್ನು ಜಾರಿಗೊಳಿಸಿದರು ಇತ್ತೀಚಿನ ದಿನಗಳಲ್ಲಿ ಈ ಘಟನೆಗಳು ನಡೆಯುತ್ತಲೆ ಇರುತ್ತದೆ.

ಇದಕ್ಕೆ ಸಂಬಂಧಿಸಿದಂತೆ ವಿಜಯಪುರ ಜಿಲ್ಲೆಯ ಯಲ್ಲಮ್ಮನ ಬೂದಿಹಾಳ ಗ್ರಾಮದಲ್ಲಿ ವರದಕ್ಷಿಣೆಗಾಗಿ ಮಹಿಳೆಯೊಬ್ಬಳ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.


ಸುವರ್ಣ ರಾಮಣ್ಣ ಅಮಾತಿಗೌಡರ್ (27) ಬದುಕುಳಿದ ಮಹಿಳೆ. ಗಂಡ, ಮೈದುನ ಹಾಗೂ ಅತ್ತೆ-ಮಾವ ಈ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ಇದೆ. ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂಬ ತವರು ಮನೆಯವರ ಆರೋಪದ ಮೇಲೆ ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಾಗಿದೆ. ಗಾಯಗೊಂಡ ಮಹಿಳೆಯನ್ನು ಬಾಗಲುಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments