Webdunia - Bharat's app for daily news and videos

Install App

ಕಾವೇರಿ ಹಿಂಸಾಚಾರ ದುರದೃಷ್ಟಕರ ಎಂದ ಗೃಹ ಸಚಿವ ಜಿ.ಪರಮೇಶ್ವರ್

Webdunia
ಸೋಮವಾರ, 12 ಸೆಪ್ಟಂಬರ್ 2016 (18:26 IST)
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಮತ್ತೆ ಭುಗಿಲೆದ್ದ ಪ್ರತಿಭಟನೆ ಹಿನ್ನೆಲೆಯಲ್ಲಿ ತಮಿಳುನಾಡಿನ 27 ವಾಹನಗಳಿಗೆ ಬೆಂಕಿ ಹಚ್ಚಿ ದ್ವಂಸಗೊಳಿಸಲಾಗಿದೆ. ಅದೇ ರೀತಿ ತಮಿಳುನಾಡಿನಲ್ಲಿ ಕರ್ನಾಟಕದ ವಾಹನಗಳನ್ನು ದ್ವಂಸ ಮಾಡಲಾಗಿದೆ. ಈ ಘಟನೆಗಳು ದುರಾದೃಷ್ಟಕರ ಎಂದು ರಾಜ್ಯ ಗೃಹ ಖಾತೆ ಸಚಿವ ಜಿ.ಪರಮೇಶ್ವರ್ ವಿಷಾದ ವ್ಯಕ್ತಪಡಿಸಿದ್ದಾರೆ.
 
ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಹಾಗೂ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ಮಾಡಿರುವ ಘಟನೆಯಿಂದ ರಾಜ್ಯದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದ್ದು, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಯಲ್ಲಿ ಉಗ್ರ ಪ್ರತಿಭಟನೆ ನಡೆದಿದ್ದು, ಈ ವೇಳೆ ತಮಿಳುನಾಡಿನ ವಾಹನಗಳನ್ನು ದ್ವಂಸಗೊಳಿಸಲಾಗಿದೆ ಎಂದರು.
 
ಪ್ರತಿಭಟನೆ ಉಗ್ರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 144 ಸೆಕ್ಸೆನ್ ಜಾರಿ ಮಾಡುವಂತೆ ಹಾಗೂ ಪಾಂಡವಪುರದ 4 ಡ್ಯಾಂಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
 
ಈಗಾಗಲೇ ಕೇಂದ್ರದಿಂದ 10 ಪೊಲೀಸ್ ತುಕಡಿಯನ್ನು ಕರೆಸಿಕೊಂಡಿದ್ದು, ಇನ್ನೂ 10 ಪೊಲೀಸ್ ತುಕಡಿಯನ್ನು ಕಳುಹಿಸಿ ಕೊಡುವಂತೆ ಮನವಿ ಮಾಡಿಕೊಂಡಿದ್ದೇನೆ ಎಂದು ತಿಳಿಸಿದರು.
 
ಉಭಯ ರಾಜ್ಯಗಳ ನಡುವಿನ ಗಲಭೆಗೆ ಸಂತೋಷ್ ಎಂಬ ಯುವಕನೇ ನೇರ ಕಾರಣ. ಪ್ರತಿಭಟನಾನಿರತರನ್ನು ಪ್ರಚೋದಿಸುವಂತೆ ಪೋಸ್ಟ್ ಮಾಡಿರುವ ಹಿನ್ನೆಲೆಯಲ್ಲಿ ಸಂತೋಷ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ರಾಜ್ಯ ಗೃಹ ಖಾತೆ ಸಚಿವ ಜಿ.ಪರಮೇಶ್ವರ್ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೇರಳಕ್ಕೆ ಮುಂಗಾರು ಪ್ರವೇಶ ಯಾವಾಗ ಇಲ್ಲಿದೆ ವಿವರ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಮುಂದಿನ ಸುದ್ದಿ
Show comments