Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಸಮಾವೇಶದಲ್ಲಿ ನೆಲದಲ್ಲಿ ಚೆಲ್ಲಾಡಿದ ಬಿರಿಯಾನಿ

Krishnaveni K
ಗುರುವಾರ, 1 ಫೆಬ್ರವರಿ 2024 (08:59 IST)
ಚಿತ್ರದುರ್ಗ: ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಚಿತ್ರದುರ್ಗದಲ್ಲಿ ಶೋಷಿತ ವರ್ಗದವರ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ಸಮಾವೇಶಕ್ಕೆ ಬಂದವರಿಗೆ ಊಟದ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ಸಾಮಾನ್ಯವಾಗಿ ರಾಜಕೀಯ ಸಮಾವೇಶದಲ್ಲಿ ಸಾರ್ವಜನಿಕರಿಗೆ ಊಟ ನೀಡಲಾಗುತ್ತದೆ. ಅದೇ ರೀತಿ ಚಿತ್ರದುರ್ಗದ ಕಾರ್ಯಕ್ರಮದಲ್ಲೂ ಬಿರಿಯಾನಿ ಊಟ ಹಾಕಿಸಲಾಗಿತ್ತು. ಆದರೆ ಕಾರ್ಯಕ್ರಮ ಮುಗಿದ ಮೇಲಿನ ದೃಶ್ಯವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನೆಲದ ಮೇಲೆ ಚೆಲ್ಲಾಡಿದ ಬಿರಿಯಾನಿ
ಸಮಾವೇಶಕ್ಕೆಂದು ಬಂದವರಿಗೆ ಸಾಕಷ್ಟು ಪ್ರಮಾಣದಲ್ಲಿ ಬಿರಿಯಾನಿ ಊಟ ತಯಾರಿಸಲಾಗಿತ್ತು. ಆದರೆ ಕಾರ್ಯಕ್ರಮ ಮುಗಿದ ಮೇಲೆ ಈ ಬಿರಿಯಾನಿಯನ್ನು ಅಲ್ಲಿಯೇ ನಿರ್ಮಿಸಲಾಗಿದ್ದ ಅಡುಗೆ ಮನೆಯಲ್ಲೇ ನೆಲದ ಮೇಲೆ ಗುಡ್ಡೆ ಹಾಕಲಾಗಿದೆ. ಸಿಕ್ಕ ಸಿಕ್ಕಲ್ಲೆಲ್ಲಾ ಬಿರಿಯಾನಿ ಚೆಲ್ಲಲಾಗಿದೆ. ಅದರ ಮೇಲೆಯೇ ಟ್ರ್ಯಾಕ್ಟರ್ ಒಂದು ಓಡಾಡಿದೆ. ಇಂತಹದ್ದೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನು ಗಮನಿಸಿದ ನೆಟ್ಟಿಗರು ಇದೇನಾ ಅನ್ನ ಭಾಗ್ಯ ಎಂದು ಪ್ರಶ್ನಿಸುತ್ತಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶಕ್ಕೆ ಸಾಕಷ್ಟು ಜನ ಬಂದಿದ್ದರು. ಹೀಗಿದ್ದರೂ ಮಾಡಿದ ಅಡುಗೆಯೆಲ್ಲಾ ನೆಲಪಾಲಾಗಿ ಈ ರೀತಿ ಪೋಲಾಗಿದ್ದು ದುರಾದೃಷ್ಟಕರ.

ಇದೇ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಶೋಷಿತರ ವರ್ಗದವರಿಗೆ ಆಗುತ್ತಿರುವ ಅನ್ಯಾಯ ಮತ್ತು ಬಿಜೆಪಿ ವಿರುದ್ಧ ಗುಡುಗಿದ್ದರು. ಇದರ ನಡುವೆ ಇಂತಹದ್ದೊಂದು ಘಟನೆ ನಡೆದಿದ್ದು ನಿಜವೇ ಆಗಿದ್ದಲ್ಲಿ ಅದು ದುರದೃಷ್ಟಕರವೇ ಸರಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments