Webdunia - Bharat's app for daily news and videos

Install App

ಕರ್ನಾಟಕದಲ್ಲಿ ಮೊದಲ ಕೇಸ್ ಪತ್ತೆ

Webdunia
ಗುರುವಾರ, 2 ಡಿಸೆಂಬರ್ 2021 (15:13 IST)
ಕರೊನಾ, ಡೆಲ್ಟಾ ಸೋಂಕಿನ ಭೀತಿ ನಡುವೆ ವಿಶ್ವದೆಲ್ಲೆಡೆ ಮತ್ತಷ್ಟು ತಲ್ಲಣ ಮೂಡಿಸಿರುವ ಒಮಿಕ್ರಾನ್​ ಕರ್ನಾಟಕಕ್ಕೂ ವಕ್ಕರಿಸಿದೆ. ರೂಪಾಂತರಿ ಹೊಸ ವೈರಸ್​ ಒಮಿಕ್ರಾನ್​ ಗುರುವಾರ ರಾಜ್ಯದ ಇಬ್ಬರಲ್ಲಿ ದೃಢಪಟ್ಟಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.ಸೋಂಕಿತರ ಪೈಕಿ ಒಬ್ಬನ ವಯಸ್ಸು 66, ಮತ್ತೊಬ್ಬನ ವಯಸ್ಸು 46. ಇವರಿಬ್ಬರೂ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಬಂದಿದ್ದಾರೆ. ತಪಾಸಣೆ ಮಾಡಿದಾಗ ಇಬ್ಬರಲ್ಲೂ ಒಮಿಕ್ರಾನ್​ ಸೋಂಕು ದೃಢಪಟ್ಟಿದೆ. ಆ ಮೂಲಕ ಭಾರತ ದೇಶದಲ್ಲೇ ಇದು ಮೊದಲ ಪ್ರಕರಣ ಆಗಿದೆ.
 
ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್​ ಅಗರ್​ವಾಲ್​ ಅವರು ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಖಚಿತ ಪಡಿಸಿದ್ದಾರೆ. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಲಾಗಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಜನತೆ ಭಯ ಪಡಬೇಡಿ. ಆದರೆ ಜಾಗ್ರತೆ ವಹಿಸಿ ಎಂದು ತಿಳಿಸಿದ್ದಾರೆ.
 
ದೆಹಲಿ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ, ಕರ್ನಾಟಕದಲ್ಲಿ ಒಮಿಕ್ರಾನ್​ ಕೇಸ್​ ಪತ್ತೆಯಾಗಿದ್ದರ ಕುರಿತು ಮಾತನಾಡಿದ್ದಾರೆ. ಕರ್ನಾಟಕಕ್ಕೆ ಇದೊಂದು ದೊಡ್ಡ ಸವಾಲು. ಒಮಿಕ್ರಾನ್​ ತಡೆಯೋ ಬಗ್ಗೆ ತಜ್ಞರ ಜತೆ ಚರ್ಚಿಸಿದ್ದೇವೆ, 13 ದೇಶದಲ್ಲಿ ಒಮಿಕ್ರಾನ್​ ಹೆಚ್ಚಾಗಿದೆ. ಪ್ರತಿ ವಿದೇಶಿ ಪ್ರವಾಸಿಗರ ಮೇಲೆ ನಿಗಾ ಇಟ್ಟಿದ್ದೇವೆ. ವಿದೇಶದಿಂದ ಬಂದವರಿಗೆ 7 ದಿನ ಕ್ವಾರಂಟೈನ್​ ಮಾಡಲಾಗುತ್ತಿದೆ. ಮಾನಮ್ಮ ಜನರ ಆರೋಗ್ಯ ರಕ್ಷಣೆಯನೇ ನಮ್ಮ ಆದ್ಯ ಕರ್ತವ್ಯ. ಒಬ್ಬನಿಂದ ಇಡೀ ನಗರಕ್ಕೆ ಸೋಂಕು ಹರಡುವುದನ್ನು ತಡೆಯಬೇಕು ಎಂದು ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

Tiranga Yatra, ಭಾರತೀಯ ಯೋಧರಿಗೆ ಸ್ಥೈರ್ಯ ತುಂಬಲು ತಿರಂಗಾ ಯಾತ್ರೆ: ಬಿವೈ ವಿಜಯೇಂದ್ರ

ಅಶ್ಲೀಲ ವಿಡಿಯೋಗಳನ್ನು ಹರಿಬಿಡುವುದಾಗಿ ಆನಂದ್‌ ಗುರೂಜಿಗೆ ಬೆದರಿಕೆ: ದಿವ್ಯ ವಸಂತಾ ಸೇರಿ ಇಬ್ಬರ ವಿರುದ್ಧ ದೂರು

ಮುಂದಿನ ಸುದ್ದಿ
Show comments