Webdunia - Bharat's app for daily news and videos

Install App

ರಷ್ಯಾ ಹಣಕಾಸು ಸಂಸ್ಥೆಗಳಿಗೆ ವೀಸಾ, ಮಾಸ್ಟರ್‌ ಕಾರ್ಡ್‌ ಬ್ಲಾಕ್‌ – ATMಗಳ ಮುಂದೆ ರಷ್ಯನ್ನರ ದಂಡು

Webdunia
ಬುಧವಾರ, 2 ಮಾರ್ಚ್ 2022 (21:02 IST)
ಯುಎಸ್‌ ಪಾವತಿ ಕಾರ್ಡ್‌ ಸಂಸ್ಥೆಗಳಾದ ವೀಸಾ ಮತ್ತು ಮಾಸ್ಟರ್‌ ಕಾರ್ಡ್‌ ತಮ್ಮ ನೆಟ್‌ವರ್ಕ್‌ನಿಂದ ರಷ್ಯಾದ ಹಣಕಾಸು ಸಂಸ್ಥೆಗಳನ್ನು ನಿರ್ಬಂಧಿಸಿವೆ. ಉಕ್ರೇನ್‌ ಮೇಲಿನ ರಷ್ಯಾ ಆಕ್ರಮಣಕ್ಕೆ ವಿರೋಧ ವ್ಯಕ್ತಪಡಿಸಿರುವ ಅಮೆರಿಕ ಹಲವು ನಿರ್ಬಂಧಗಳನ್ನು ವಿಧಿಸುತ್ತಿದೆ.
ಸೋಮವಾರದಿಂದಲೇ ಈ ನಿರ್ಬಂಧ ಅನ್ವಯವಾಗುವಂತೆ ಕ್ರಮ ಕೈಗೊಳ್ಳಲಾಗಿದೆ. ಮಾನವೀಯ ಸಹಾಯಕ್ಕಾಗಿ 15.14 ಕೋಟಿ (2 ಮಿಲಿಯನ್‌ ಡಾಲರ್)‌ ದೇಣಿಗೆ ನೀಡುವುದಾಗಿ ವೀಸಾ ಸ್ಪಷ್ಟಪಡಿಸಿದೆ. ಮಾಸ್ಟರ್‌ ಕಾರ್ಡ್‌ ಕೂಡ 15.14 ಕೋಟಿ ರೂ. ಕೊಡುಗೆ ನೀಡುವುದಾಗಿ ತಿಳಿಸಿದೆ.
ಸರ್ಕಾರದ ನಿರ್ಬಂಧಗಳ ಪ್ರಕಾರ ವಿಶೇಷವಾಗಿ ಗೊತ್ತುಪಡಿಸಿದ ರಾಷ್ಟ್ರದ್ದು ಎಂದು ಪಟ್ಟಿ ಮಾಡಲಾದ ಘಟಗಳಿಗೆ ವೀಸಾ ತನ್ನ ನೆಟ್‌ವರ್ಕ್‌ಗೆ ಪ್ರವೇಶವನ್ನು ಅಮಾನತುಗೊಳಿಸಿದೆ. ರಷ್ಯಾದ ಕೇಂದ್ರ ಬ್ಯಾಂಕ್‌ ಮತ್ತು ಎರಡನೇ ಅತಿ ದೊಡ್ಡ ಸಾಲದಾತ ವಿಟಿಬಿ ಸೇರಿದಂತೆ ವಿವಿಧ ಹಣಕಾಸು ಸಂಸ್ಥೆಗಳನ್ನು ಈ ಪಟ್ಟಿಗೆ ಸೇರಿಸಲಾಗಿದೆ. ಯುಎಸ್‌, ಬ್ರಿಟನ್‌, ಯೂರೋಪ್‌ ಮತ್ತು ಕೆನಡಾ ದೇಶಗಳು ರಷ್ಯಾದ ಮೇಲೆ ಹೊಸ ನಿರ್ಬಂಧಗಳನ್ನು ಶನಿವಾರವೂ ಘೋಷಿಸಿವೆ.
ಹಲವು ನಿರ್ಬಂಧಗಳ ಹಿನ್ನೆಲೆಯಲ್ಲಿ ಬ್ಯಾಂಕ್‌ ಕಾರ್ಡ್‌ಗಳು ಕಾರ್ಯನಿರ್ವಹಿಸುವುದನ್ನು ನಿಲ್ಲಿಸಬಹುದು, ಬ್ಯಾಂಕ್‌ಗಳು ನಗದು ಹಿಂಪಡೆಯುವಿಕೆಯನ್ನು ಮಿತಿಗೊಳಿಸಬಹುದು ಎಂದು ಆತಂಕದಲ್ಲಿ ರಷ್ಯನ್ನರು ಎಟಿಎಂಗಳ ಮುಂದೆ ಅಪಾರ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ. ಭಾನುವಾರ ಮತ್ತು ಸೋಮವಾರ ಎಟಿಎಂಗಳ ಮುಂದೆ ರಷ್ಯನ್ನರ ಉದ್ದದ ಕ್ಯೂ ಇದ್ದ ದೃಶ್ಯಗಳು ಕಂಡುಬಂದಿದ್ದವು.
ರಷ್ಯಾ ಕಳೆದ ವಾರ ಉಕ್ರೇನ್‌ ಮೇಲೆ ಯುದ್ಧವನ್ನು ಸಾರಿತು. ಇದಕ್ಕೆ ಅನೇಕ ಪಾಶ್ಚಿಮಾತ್ಯ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಅನೇಕ ಪಾಶ್ಚಿಮಾತ್ಯ ಬ್ಯಾಂಕ್‌ಗಳು, ವಿಮಾನಯಾನ ಸಂಸ್ಥೆಗಳು ರಷ್ಯಾದೊಂದಿಗೆ ಸಂಬಂಧವನ್ನು ಕಡಿತಗೊಳಿಸಿವೆ. ರಷ್ಯಾದ ಕ್ರಮಗಳು ಸ್ವೀಕಾರಾರ್ಹವಲ್ಲ ಎಂದು ವಿರೋಧಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

Bengaluru Stampede: ನಾವಲ್ಲ ನೀವೇ ಮಾಡಿರೋದು.. ಸರ್ಕಾರದ ವಿರುದ್ಧ ತಿರುಗಿಬಿದ್ದ ಕೆಎಸ್ ಸಿಎ

ಮುಂದಿನ ಸುದ್ದಿ
Show comments