Webdunia - Bharat's app for daily news and videos

Install App

ವಿಶ್ವನಾಥ್, ಸಿದ್ದರಾಮಯ್ಯರ ಕಲಹ 23 ರ ನಂತ್ರ ಸರಿಹೋಗುತ್ತಂತೆ!

Webdunia
ಮಂಗಳವಾರ, 14 ಮೇ 2019 (15:42 IST)
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.‌ವಿಶ್ವನಾಥ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ‌. ಇಬ್ಬರೂ 35 ವರ್ಷದ ಸ್ನೇಹಿತರು‌. ಈಗ ಇಬ್ಬರ ನಡುವೆ ನಡೆಯುತ್ತಿರುವುದು ತೋರಿಕೆಯ ಕಲಹ ಮಾತ್ರ.

ಮೇ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಎಲ್ಲವೂ ಸರಿ ಹೋಗುತ್ತದೆ. ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಮೋದಿ ಪ್ರಧಾನಿ ಆಗುವುದಿಲ್ಲ‌. ರಾಜ್ಯದಲ್ಲಿ ಮಾತ್ರ ಮೈತ್ರಿ ಸರ್ಕಾರಕ್ಕೆ ಯಾವುದೇ ಹಾನಿಯಾಗುವುದಿಲ್ಲ. ಹೀಗಂತ ಎಂಎಲ್ ಸಿ ಸಿ.ಎಂ. ಇಬ್ರಾಹಿಂ ಹೇಳಿಕೆ ನೀಡಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಒಳ್ಳೆಯವರೇ ಆದರೆ ಅವರು ಇರುವ ಪಕ್ಷ ಮಾತ್ರ ಸರಿ ಇಲ್ಲ‌. ಮೇ 23ರಂದು ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದಂತೆ ಯಡಿಯೂರಪ್ಪ ಅವರೇ ಪಕ್ಷ ಬಿಟ್ಟು ಹೊರ ಬರುತ್ತಾರೆ. ಅಧಿಕಾರವಿಲ್ಲದ ಪಕ್ಷದಲ್ಲಿ ಯಾರೂ ಉಳಿಯುವುದಿಲ್ಲ. ಬಿಜೆಪಿ ನಿಂತಿರುವುದೇ ಯಡಿಯೂರಪ್ಪರ ಬಲದ ಮೇಲೆ.

ಆದರೆ ವೀರಶೈವ ಲಿಂಗಾಯಿತರಿಗೆ ಬಿಜೆಪಿ ಅನ್ಯಾಯ ಮಾಡಿದೆ. 8 ಎಂಪಿಗಳಿದ್ದರೂ ಒಬ್ಬರಿಗೂ ಮಂತ್ರಿ ಮಾಡಲಿಲ್ಲ. ಈಗ ಬಿಜೆಪಿಯಲ್ಲೂ ಒಂದು ಬಣ ಯಡಿಯೂರಪ್ಪ ವಿರುದ್ಧ ಕೆಲಸ ಮಾಡುತ್ತಿದೆ. ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನ ಮಾಡುತ್ತಿದೆ. ಹಾಗಾಗಿಯೇ ಇನ್ನು ಬಿಜೆಪಿಗೆ ಭವಿಷ್ಯವಿಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments