Webdunia - Bharat's app for daily news and videos

Install App

ಹೊಸ ವರ್ಷಕ್ಕೆ ದೇಗುಲಗಳಿಗೆ ಭೇಟಿ

Webdunia
ಭಾನುವಾರ, 1 ಜನವರಿ 2023 (16:25 IST)
ಇಂದು ಹೊಸ ವರ್ಷದ ಮೊದಲ ದಿನ. ಕ್ಯಾಲೆಂಡರ್ ಬದಲಾಯಿಸುವ ದಿನ. ಕಳೆದು ಹೋದ ದಿನ, ಕಹಿ ನೆನಪು, ನೋವು ಎಲ್ಲವನ್ನೂ ಮರೆತು ಹೊಸ ಹರುಷದಿಂದ ಹೊಸ ವರ್ಷವನ್ನು ಬರ ಮಾಡಿಕೊಳ್ಳಲಾಗಿದೆ. ಸದ್ಯ ಬೆಂಗಳೂರಿಗರು ಹೊಸ ವರ್ಷದ ಮೊದಲ ದಿನದಂದು ದೇವಸ್ಥಾನಗಳತ್ತ ಮುಖ ಮಾಡಿದ್ದಾರೆ. ಕೈ ಮುಗಿದು ದೇವರಲ್ಲಿ ಬೇಡಿ ಹೊಸ ವರ್ಷ ಸುಖ, ಸಂತೋಷ, ನೆಮ್ಮದಿ ತೆರಳಿ ಎಂದು ಪ್ರಾರ್ಥಿಸುತ್ತಿದ್ದಾರೆ. ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದೇವಸ್ಥಾನಗಳಿಗೆ ಜನರ ಭೇಟಿ ಹೆಚ್ಚಾಗಿದೆ. ಬೆಂಗಳೂರಿನ ಮಲ್ಲೇಶ್ವರಂನ ಕಾಡುಮಲ್ಲೇಶ್ವರ ದೇವಸ್ಥಾನದಲ್ಲಿ ಬೆಳ್ಳಗ್ಗೆ 6 ಗಂಟೆಯಿಂದಲೇ ವಿಶೇಷ ಪೂಜೆ ಆರಂಭವಾಗಿದೆ. ಗಂಗಾಭಿಷೇಕ, ಪಂಚಾಭಿಷೇಕ, ಪುಷ್ಪಾಭಿಷೇಕ ನೆರವೇರಿದ್ದು ಇದನ್ನು ಕಣ್ತುಂಬಿಕೊಂಡ ಭಕ್ತರು ಪುನೀತರಾಗಿದ್ದಾರೆ. ಶಿರಡಿ ಸಾಯಿ ಬಾಬಾ, ಗಣೇಶ ದೇವಸ್ಥಾನ, ಗವಿ ಗಂಗಾಧರ ದೇವಸ್ಥಾನ, ಬನಶಂಕರಿ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ದೇವಸ್ಥಾನಗಳಿಗೆ ಬರುವ ಭಕ್ತರಿಗೆ ಅರ್ಚಕರು ತೀರ್ಥ, ಪ್ರಸಾದ ವಿತರಿಸುತ್ತಿದ್ದಾರೆ. ಇಂದು ದೇವರಿಗೆ ವಿಶೇಷ ಅಲಂಕಾರ ಜೊತೆಗೆ ಹೋಮ ಹವನ ಮಾಡಲಾಗುತ್ತಿದೆ. ಇನ್ನು ಕಾಡುಮಲ್ಲೇಶ್ವರ ದೇವಸ್ಥಾನಕ್ಕೆ ರಾತ್ರಿ 9 ಗಂಟೆಯವರೆಗೂ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಸಂಜೆ ಕಲ್ಯಾಣೋತ್ಸವ ನೆರವೇರಲಿದ್ದು ಕೊವಿಡ್ ರೂಲ್ಸ್ ಗಳನ್ನ ಪಾಲನೆ ಮಾಡುವಂತೆ ದೇವಸ್ಥಾನ ಆಡಳಿತ ಮಂಡಳಿ ಭಕ್ತಾದಿಗಳಿಗೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀಡಂ ಪಾರ್ಕ್‌ನ ಕಾಂಪೌಂಡ್ ನೆಲಸಮದಿಂದ ಪರಿಸರಕ್ಕೆ ಹಾನಿ: ಬಿಜೆಪಿ ದೂರು

ಮುಂಬೈ– ಪುಣೆ ಪ್ರಯಾಣಿಕರ ಜತೆ ಗುಡ್‌ನ್ಯೂಸ್ ಹಂಚಿಕೊಂಡ ನಿತಿನ್ ಗಡ್ಕರಿ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮುಂದಿನ ಸುದ್ದಿ
Show comments