Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ನಾಯಕ ವಿವೇಕ್ ಶೆಟ್ಟಿ ಹಲ್ಲೆ ಆರೋಪಿಗಳು ನಾಪತ್ತೆ: ಪೊಲೀಸರ ವಿರುದ್ಧ ಜನರ ಆಕ್ರೋಶ

ಕಾಂಗ್ರೆಸ್ ನಾಯಕ ವಿವೇಕ್ ಶೆಟ್ಟಿ ಹಲ್ಲೆ ಆರೋಪಿಗಳು ನಾಪತ್ತೆ: ಪೊಲೀಸರ ವಿರುದ್ಧ ಜನರ ಆಕ್ರೋಶ
ಬೆಳಗಾವಿ , ಬುಧವಾರ, 11 ಜನವರಿ 2017 (18:55 IST)
ಕಾಂಗ್ರೆಸ್ ನಾಯಕ ವಿವೇಕ್ ಶೆಟ್ಟಿ ಮೇಲೆ ಬಿಜೆಪಿ ಶಾಸಕ ರಾಜು ಕಾಗೆ ಕುಟುಂಬದ ಗೂಂಡಾಗಿರಿ ಪ್ರಕರಣ ನಡೆದು ಮೂರು ದಿನಗಳೇ ಕಳೆದರೂ ಆರೋಪಿಗಳನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ.  
 
ಆರೋಪಿಗಳನ್ನು ಬಂಧಿಸಲು ಅಥಣಿ ವಿಭಾಗದ ಡಿವೈಎಸ್‌ಪಿ ಸತೀಶ್ ಚಿಟಗುಪ್ಪಿ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಆದರೆ, ಇನ್ನೂ ಆರೋಪಿಗಳ ಸುಳಿವು ಸಿಕ್ಕಿಲ್ಲ. 
 
ಫೇಸ್‌ಬುಕ್‌ನಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕನ ಮನೆಗೆ ನುಗ್ಗಿ ಬಿಜೆಪಿ ಶಾಸಕ ರಾಜು ಕಾಗೆ ಪುತ್ರಿ ಹಾಗೂ ಟೀಂ ಡೆಡ್ಲಿ ಅಟ್ಯಾಕ್ ಮಾಡಿದ ಘೋರ ಕೃತ್ಯ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಉಗಾರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿತ್ತು. 
 
ಈ ಕುರಿತು ಬಿಜೆಪಿ ಶಾಸಕ ರಾಜು ಕಾಗೆ, ಪುತ್ರಿ ಕೃತಿಕಾ ಕಾಗೆ, ಸಹೋದರ ಶಿವಗೊಂಡ ಕಾಗೆ, ವಾಹನ ಚಾಲಕ ಬಾಹುಬಲಿ ಸೇರಿದಂತೆ ಒಟ್ಟು 13 ಜನರ ವಿರುದ್ಧ ಐಪಿಸಿ ಸೆಕ್ಷೆನ್ 143, 147, 148, 307, 302, 323, 354 ಅಡಿಯಲ್ಲಿ ಕಾಗವಾಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸರಕಾರ ನಾವು ಕೇಳಿದಷ್ಟು ಪರಿಹಾರ ನೀಡಬೇಕು: ಸಚಿವ ಕೃಷ್ಣಭೈರೆಗೌಡ