Select Your Language

Notifications

webdunia
webdunia
webdunia
webdunia

ಅಧ್ಯಕ್ಷ ಕಾಳೇಗೌಡ ಮತ್ತು ಅಪ್ಪಾಜಿಗೌಡ ಸೇರಿದಂತೆ ಒಟ್ಟು ಮೂವರ ವಿರುದ್ಧ ವಿವಿಪುರಂ‌ ಪೊಲೀಸರು ಎಫ್ ಐಆರ್

ಅಧ್ಯಕ್ಷ ಕಾಳೇಗೌಡ ಮತ್ತು ಅಪ್ಪಾಜಿಗೌಡ ಸೇರಿದಂತೆ ಒಟ್ಟು ಮೂವರ ವಿರುದ್ಧ ವಿವಿಪುರಂ‌ ಪೊಲೀಸರು ಎಫ್ ಐಆರ್
bangalore , ಶುಕ್ರವಾರ, 1 ಅಕ್ಟೋಬರ್ 2021 (22:08 IST)
ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಕಾಳೇಗೌಡ ಮತ್ತು ಅಪ್ಪಾಜಿಗೌಡ ಸೇರಿದಂತೆ ಒಟ್ಟು ಮೂವರ ವಿರುದ್ಧ ವಿವಿಪುರಂ‌ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ಕಿಮ್ಸ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬರು ಪಾವತಿಸಿದ್ದ 70 ಲಕ್ಷ ರೂ. ಶುಲ್ಕವನ್ನು ಸ್ವಂತಕ್ಕೆ ಬಳಕೆ ಮಾಡಿಕೊಮಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ವಿದ್ಯಾರ್ಥಿಯು ಕಟ್ಟಿದ್ದ ಶುಲ್ಕವನ್ನು ಸ್ವಂತಕ್ಕೆ ಬಳಕೆ ಮಾಡಿಕೊಂಡ ಕಿಮ್ಸ್ ಕಾಲೇಜಿನ ಮಾಜಿ ಅಧ್ಯಕ್ಷ ಕಾಳೇಗೌಡ, ಅಪ್ಪಾಜಿಗೌಡ ಸೇರಿದಂತೆ ಒಟ್ಟು ಮೂವರ ವಿರುದ್ಧ ಕಿಮ್ಸ್ ನ ಸಿಇಒ ಸಿದ್ದರಾಮಯ್ಯ ವಿವಿಪುರಂ‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ವಿವಿಪುರಂ ಪೊಲೀಸರು ಸಿಇಒ‌ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ಏನಿದು ಪ್ರಕರಣ:
ಡಾ. ಅನುಷಾ ದೀಪ್ತಿ ಎಂಬ ವಿದ್ಯಾರ್ಥಿನಿ ಕಿಮ್ಸ್ ನಲ್ಲಿ ಪ್ರಸೂತಿ ಹಾಗೂ ಸ್ತೀರೋಗ ಕೋರ್ಸ್ ವ್ಯಾಸಾಂಗ ಮಾಡುತ್ತಿದ್ದರು. 2016 -17 ರಲ್ಲಿ ಫೀಸ್ ಕಟ್ಟದ ಅನುಷಾಗೆ ನೋಟಿಸ್ ನೀಡಲಾಗಿತ್ತು. ನೋಟಿಸ್ ನೀಡಿದ್ದ ಕಾರಣ 70 ಲಕ್ಷ ರೂ. ಹಣವನ್ನು ಅಂದಿನ ಚೇರ್ಮನ್ ಕಾಳೇಗೌಡಗೆ ಅನುಷಾ ನೀಡಿದ್ದರು. ಆದರೆ ಅನುಷಾ ನೀಡಿದ್ದ ಹಣವನ್ನು ಕಾಲೇಜಿ ಗೆ ಸಂದಾಯ ಮಾಡದ ಅಂದಿನ ಅಧ್ಯಕ್ಷ ಸ್ವಂತಕ್ಕೆ ಬಳಕೆ ಮಾಡಿಕೊಂಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಾನಗರದಲ್ಲಿ ಮತ್ತೊಂದು ದುರಂತ