Webdunia - Bharat's app for daily news and videos

Install App

ವೃತ್ತಿ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು : ಆರ್. ಅಶೋಕ್

Webdunia
ಬುಧವಾರ, 25 ಜನವರಿ 2023 (09:52 IST)
ಬೆಂಗಳೂರು : ಆಧುನಿಕ ಯುಗದಲ್ಲಿ ತಂತ್ರಜ್ಞಾನ ಮುಂದುವರಿದಂತೆ, ವರದಿಯನ್ನು ಮುಟ್ಟಿಸುವಲ್ಲಿ ವೇಗ ಕಂಡಿದ್ದು, ಅದರಂತೆ ಪತ್ರಿಕಾ ರಂಗದಲ್ಲಿ ಪತ್ರಕರ್ತರು ತಮ್ಮ ವೃತ್ತಿ ಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕೆಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.

ಇಂದು ಕಬ್ಬನ್ ಪಾರ್ಕ್ ಪ್ರೆಸ್ ಕ್ಲಬ್ನಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಹಮ್ಮಿಕೊಂಡಿದ್ದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಪ್ರಕರ್ತರಿಗೆ ಟ್ಯಾಬ್ ವಿತರಣೆ ಸಮಾರಂಭದ ಉದ್ಘಾಟನೆ ನೆರವೇರಿಸಿ 16 ಪತ್ರಕರ್ತರಿಗೆ ಟ್ಯಾಬ್ಗಳನ್ನು ವಿತರಣೆ ಮಾಡಿ ಮಾತನಾಡಿದ ಸಚಿವರು, ಮಾಧ್ಯಮದಲ್ಲಿ ಕೆಲಸ ಮಾಡುವವರಿಗೂ ಸವಲತ್ತುಗಳ ಅವಶ್ಯಕತೆ ಇದೆ ಎಂದರು.

ಟ್ಯಾಬ್ ವಿತರಿಸುವುದರ ಜೊತೆಗೆ ಅದನ್ನು ಉಪಯೋಗಿಸುವ ವಿಧಾನ, ಅದರ ವಿಶೇಷತೆ ಮತ್ತು ಅನುಕೂಲದ ಕುರಿತು ತರಬೇತಿ ನೀಡುವ ಅವಶ್ಯಕತೆ ಇದೆ. ಎಲೆಕ್ಟ್ರಾನಿಕ್ ಮಾಧ್ಯಮಕ್ಕೂ, ಮುದ್ರಣ ಮಾಧ್ಯಮಕ್ಕೂ ಬಹಳಷ್ಟು ವ್ಯತ್ಯಾಸವಿದೆ.

ಎಲೆಕ್ಟ್ರಾನಿಕ್ ಮಾಧ್ಯಮವು ಬ್ರೇಕಿಂಗ್ ನ್ಯೂಸ್ ನೀಡುವ ಆತುರದಲ್ಲಿ ಸತ್ಯಾಸತ್ಯತೆಯನ್ನು ಪರಿಶೀಲಿಸದೆ ತಕ್ಷಣವೇ ಪ್ರಸಾರ ಮಾಡುತ್ತಿವೆ, ಆದರೆ ಮುದ್ರಣ ಮಾಧ್ಯಮಗಳು ಪರಿಶೀಲಿಸಿ ಸುದ್ದಿ ನೀಡುತ್ತಾರೆ ಎಂದರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments