Webdunia - Bharat's app for daily news and videos

Install App

ಸಂಪುಟ ವಿಸ್ತರಣೆ: ಕೈ ಪಾಳೆಯದಲ್ಲಿ ತೀವ್ರಗೊಂಡ ಒತ್ತಡ

Webdunia
ಶನಿವಾರ, 1 ಡಿಸೆಂಬರ್ 2018 (20:27 IST)
ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟ ವಿಸ್ತರಣೆಯ ಸಂಕಟಕ್ಕೆ ಕಾಂಗ್ರೆಸ್ ಸಿಲುಕಿದೆ.

ರಾಜ್ಯ ಕಾಂಗ್ರೆಸ್ ನಾಯಕರು ಸಂಪುಟ ವಿಸ್ತರಣೆಗೆ ಹೈಕಮಾಂಡ್ ಕದ ತಟ್ಟಲು ಮುಂದಾಗಿದ್ದು, ಸಂಪುಟ ವಿಸ್ತರಣೆಯಾಗದಿದ್ದರೆ ಶಾಸಕರ ಅತೃಪ್ತಿ, ಅಸಮಾಧಾನ ಸ್ಫೋಟವಾಗಲಿದೆ. ಬಿಜೆಪಿ ಸೆಳೆತದಿಂದ ಶಾಸಕರನ್ನು ದೂರ ಇಡುವುದು ಕಷ್ಟವಾಗುತ್ತದೆ ಎಂಬುದನ್ನು ಹೈಕಮಾಂಡ್ಗೆ ಮನವರಿಕೆ ಮಾಡಿಕೊಡಲು ತೀರ್ಮಾನಿಸಿದ್ದಾರೆ.

ಸಚಿವಾಕಾಂಕ್ಷಿ ಶಾಸಕರುಗಳು ಬೆಳಗಾವಿಯಲ್ಲಿ ಡಿ. 10 ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಆಗಲೇಬೇಕು. ಇಲ್ಲದಿದ್ದರೆ ನಮ್ಮ ದಾರಿ ನಾವು ನೋಡಿಕೊಳ್ಳುತ್ತೇವೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಸಂಕಟವನ್ನು ಬಗೆಹರಿಸಿಕೊಳ್ಳಲು ರಾಜ್ಯ ಕಾಂಗ್ರೆಸ್ ನಾಯಕರು ಪಕ್ಷದ ಹೈಕಮಾಂಡ್ನ್ನು ಭೇಟಿ ಮಾಡಿ ಚರ್ಚೆ ನಡೆಸಲು ನಿರ್ಧರಿಸಿದ್ದಾರೆ.

ಸಂಪುಟ ವಿಸ್ತರಣೆಯಾಗದಿದ್ದರೆ ಪಕ್ಷದ ಶಾಸಕರಲ್ಲಿ ಒಗ್ಗಟ್ಟು ಕಾಪಾಡಿಕೊಳ್ಳುವುದು ಕಷ್ಟವಾಗುತ್ತದೆ. ಇದರಿಂದ ಸರ್ಕಾರಕ್ಕೆ ಕಂಟಕವಾಗಬಹುದು. ಹಾಗಾಗಿ ಸಂಪುಟ ವಿಸ್ತರಣೆಗೆ ಒಪ್ಪಿಗೆ ನೀಡಿ ಎಂದು ರಾಜ್ಯದ ಕಾಂಗ್ರೆಸ್ ನಾಯಕರು ಹೈಕಮಾಂಡ್ಗೆ ಮನವಿ ಮಾಡಿಕೊಳ್ಳಲು ತೀರ್ಮಾನಿಸಿದ್ದಾರೆ.

 ಸಚಿವ ಸಂಪುಟ ವಿಸ್ತರಣೆ ವಿಷಯ ಕಾಂಗ್ರೆಸ್ ಗೆ ಸದ್ಯ ಬಿಸಿ ತುಪ್ಪದಂತಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments