Webdunia - Bharat's app for daily news and videos

Install App

ಸಂಪುಟ ಸೇರಲು ಲಾಬಿ : ಈ ಬಾರಿ ಯುವಕರಿಗೆ ಮಣೆ

Webdunia
ಗುರುವಾರ, 29 ಜುಲೈ 2021 (09:09 IST)
ಬೆಂಗಳೂರು (ಜು.29) : ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಪ್ರಮಾಣವಚನ ಸ್ವೀಕರಿಸಿದ ಬೆನ್ನಲೇ ಬಿಜೆಪಿಯಲ್ಲಿ ಸಂಪುಟ ರಚನೆಗೆ  ಭರ್ಜರಿಯಾಗಿಯೇ ಲಾಬಿ ಅರಂಭವಾಗಿದೆ. ಈ ಬಾರಿ ಹಿರಿಯರ ಬದಲು ಯುವಕರಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ.

•ಬಿಜೆಪಿಯಲ್ಲಿ ಸಂಪುಟ ರಚನೆಗೆ  ಭರ್ಜರಿಯಾಗಿಯೇ ಲಾಬಿ ಅರಂಭವಾಗಿದೆ
•ಈ ಬಾರಿ ಹಿರಿಯರ ಬದಲು ಯುವಕರಿಗೆ ಆದ್ಯತೆ ನೀಡುವ ಸಾಧ್ಯತೆ
ವಲಸಿಗರಿಗೂ ಸೇರಿದಂತೆ ಇದುವರೆಗೆ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದವರಿಗೆ   ಹೊಸ ಸಂಪುಟದಲ್ಲಿ ಅವಕಾಶ ಸಿಗುವುದೋ ಇಲ್ಲವೋ ಎಂಬ ಆತಂಕ ಎದುರಾಗಿದ್ದರೆ ಈ ಬಾರಿಯಾದರೂ ತಮಗೆ ಸಚಿವ ಸ್ಥಾನ ಸಿಗಬೇಕು ಎಂಬ ಪಟ್ಟನ್ನು  ಹಿಂದಿನ ಸಂಪುಟ ವಿಸ್ತರಣೆಯಲ್ಲಿ ಅವಕಾಶ  ವಂಚಿತರಾದವರು ಬಹಿರಂಗವಾಗಿ ಪ್ರಸ್ತಾಪಿಸುತ್ತಿದ್ದಾರೆ.
ಅನೇಕ ಶಾಸಕರು ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ರಾಜ್ಯಕ್ಕೆ ಆಗಮಿಸಿದ್ದ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್  ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿ, ಸಚಿವ ಸಂಪುಟ ಬಗ್ಗೆ ಮುಖ್ಯಮಂತ್ರಿಗಳು ಮತ್ತು ರಾಷ್ಟ್ರೀಯ ನಾಯಕರು ಎಲ್ಲವನ್ನೂ ನಿರ್ಧಾರ ಮಾಡುತ್ತಾರೆ. ಅತಿ ಶೀಘ್ರದಲ್ಲಿ ಸಚಿವ ಸಂಪುಟ ರಚನೆಯಾಗಲಿದೆ ಎಂದು ತಿಳಿಸಿದರು.
ಶಾಸಕ ತಿಪ್ಪಾರೆಡ್ಡಿ ಮಾತನಾಡಿ ಈ ಬಾರಿ ಸಚಿವ ಸ್ಥಾನ ಸಿಗಬಹುದು ಎನ್ನುವ ವಿಶ್ವಾಸ ಇದೆ. ಹೊಸಬರಿಗೆ ಅವಕಾಶ ಕೊಟ್ಟರೆ ಪಕ್ಷ ಬೆಳೆಯಲು ಅವಕಾಶ ಸಿಗಲಿದೆ ಎಂದು ಹೇಳಿದರು. ಬಿಸಿ ಪಾಟೀಲ್ ಸಿಎಂ ಬದಲಾಗಿದ್ದಾರೆಯೇ ಹೊರತು ಬಿಜೆಪಿ ಅಲ್ಲ. ನಾವು ಅನ್ಯ ಪಕ್ಷದಿಂದ ಬಂದಿರುವ 17 ಮಂದಿ ಖುಷಿಯಾಗಿದ್ದೇವೆ. ದೆಹಲಿ ವರಿಷ್ಠರ ಮಾರ್ಗದರ್ಶನದಲ್ಲಿ ಎಲ್ಲವೂ ಒಳ್ಳೆಯದು ಆಗಲಿದೆ ಎಂದರು. ಶಾಸಕ ಕುಮಾರ್ ಬಂಗಾರಪ್ಪ ಸಿದ್ದು ಸವದಿ ಕೂಡ ಆಕಾಂಕ್ಷಿ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ಮುಂದಿನ ಸುದ್ದಿ
Show comments