Webdunia - Bharat's app for daily news and videos

Install App

ಹಿಂದೂ ಪರ ವ್ಯಕ್ತಿಗೆ ಮತ ಹಾಕಿ, ಇಲ್ಲದಿದ್ದರೆ ಬಾಂಗ್ಲಾ, ಪಾಕ್‌ ಪರಿಸ್ಥಿತಿ ಬರುತ್ತದೆ : ಕೆಎಸ್ ಈಶ್ವರಪ್ಪ

Sampriya
ಬುಧವಾರ, 13 ನವೆಂಬರ್ 2024 (15:14 IST)
Photo Courtesy X
ಶಿವಮೊಗ್ಗ: ಹಿಂದೂಗಳ ಪರವಾಗಿ ಇರುವ ಸ್ಪರ್ಧಿಗೆ ಮತ ಹಾಕಿ ಗೆಲ್ಲಿಸಿ. ಇಲ್ಲದಿದ್ದರೆ ಮುಂದೆ  ಪಾಕಿಸ್ತಾನ, ಬಾಂಗ್ಲಾದೇಶದ ಪರಿಸ್ಥಿತಿ ಬರುತ್ತದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಸ್ಲಿಂ ಸಮುದಾಯದವರು ಮಾಡುತ್ತಿರುವ ಅಚಾತುರ್ಯವನ್ನು ನೋಡಿಯು ಕಾಂಗ್ರೆಸ್ ಸರ್ಕಾರ ಸುಮ್ಮನಾಗಿದೆ. ಪ್ರತಿನಿತ್ಯ ಮುಸ್ಲಿಮರ ಒಂದಲ್ಲ ಒಂದು ಅನ್ಯಾಯ ಕಾಣುತ್ತಿದೆ. ರೈತರು, ದೇವಸ್ಥಾನ, ಸಾಧು ಸಂತರು, ಪುರಾತತ್ವ ಇಲಾಖೆ ಆಸ್ತಿಯನ್ನು ವಕ್ಫ್ ಆಸ್ತಿ ಎಂದು ಮಾಡಿಕೊಂಡಿದ್ದಾರೆ. ಇದುವರೆಗೂ ಕಾಂಗ್ರೆಸ್ ನಾಯಕರ ಬಾಯಲ್ಲಿ ವಕ್ಫ್ ಆಸ್ತಿ ಆಗಲು ಬಿಡಲ್ಲ ಎಂದು  ಬಂದಿಲ್ಲ. ಹಿಂದೂಗಳ ಪರವಾಗಿ ಇರುವವರಿಗೆ ಮತ ಹಾಕದಿದ್ದರೆ,ಪಾಕಿಸ್ತಾನ, ಬಾಂಗ್ಲಾದ ಪರಿಸ್ಥಿತಿ ಬರುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ವಕ್ಫ್ ನೋಟಿಸ್ ವಾಪಸ್ ತೆಗೆದುಗೊಂಡಿದ್ದೇವೆ ಎಂದು ಹೇಳುತ್ತಾರೆ ಆದರೆ ಸಿಎಂ, ಡಿಸಿಎಂ ಈ ಬಗ್ಗೆ ನ್ಯಾಯ ಕೊಡಿಸುತ್ತೇವೆ ಎಂದು ಹೇಳುವುದಿಲ್ಲ. ವಿಪಕ್ಷಗಳು ರಾಜಕಾರಣ ಮಾಡುತ್ತೇವೆ ಎಂದು ಹೇಳಿ ರಾಜಕಾರಣ ಮಾಡುತ್ತಿದ್ದಾರೆ. ಅಂಬೇಡ್ಕರ್ ಇಸ್ಲಾಂ ಧರ್ಮ ಸ್ವೀಕಾರ ಮಾಡಲು ಸಿದ್ಧರಿದ್ದರು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾನೆ. ಆದರೆ ಈ ನಾಯಕ ಹೇಳಿಕೆಯನ್ನು ಒಬ್ಬ ಕಾಂಗ್ರೆಸ್ ನಾಯಕನೂ ಖಂಡಿಸಿಲ್ಲ ಎಂದು ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments