Webdunia - Bharat's app for daily news and videos

Install App

ಕೋಮುವಾದಿ, ಸರ್ವಾಧಿಕಾರಿ ಆಡಳಿತದ ವಿರುದ್ಧ ಮತ ನೀಡಿದ್ದೇನೆ: ಸೌಮ್ಯ ರೆಡ್ಡಿ

Sampriya
ಶುಕ್ರವಾರ, 26 ಏಪ್ರಿಲ್ 2024 (19:35 IST)
Photo Courtesy X
ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ  ಸೌಮ್ಯ ರೆಡ್ಡಿ ಅವರು ತಮ್ಮ ಕುಟುಂಬದವರ ಜತೆ ಮತಚಲಾಯಿಸಿದರು.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ನನ್ನ ಕುಟುಂಬದ ಜೊತೆ ಮತಗಟ್ಟೆಗೆ ತೆರಳಿ ಬೆಲೆಯೇರಿಕೆ, ನಿರುದ್ಯೋಗ, ಬಡತನ, ಕೋಮುವಾದ, ಸರ್ವಾಧಿಕಾರಿ ಆಡಳಿತದ ವಿರುದ್ಧ ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗಾಗಿ, ಸಮಾನತೆ, ಸೌಹಾರ್ದತೆ, ಸಾಮಾಜಿಕ ನ್ಯಾಯದ ಪರವಾಗಿ, ನನ್ನ ತೆರಿಗೆ ನನ್ನ ಹಕ್ಕಿಗಾಗಿ, ಬೆಂಗಳೂರು ದಕ್ಷಿಣ ಕ್ಷೇತ್ರ ಹಾಗೂ ಕರ್ನಾಟಕದ ಜನತೆಯ ನ್ಯಾಯಕ್ಕಾಗಿ ನನ್ನ ಹಕ್ಕಿನ ಮತ ಚಲಾಯಿಸಿದೆ.

ನಿಮ್ಮ ಒಂದು ಮತಕ್ಕೆ ದೇಶ ಬದಲಿಸುವ ಶಕ್ತಿಯಿದೆ. ನೀವೂ ತಪ್ಪದೇ ಮತದಾನ ಮಾಡಿ.

ಬದಲಾವಣೆಗಾಗಿ ಮತ ನೀಡಿ, ದೇಶಕಟ್ಟುವ ಕೈಗೆ ನಿಮ್ಮ ಮತದ ಮೂಲಕ ಬಲತುಂಬಿ.


ಋಣ ತೀರಿಸುವ ಪ್ರಯತ್ನ: ಸೌಮ್ಯ ರೆಡ್ಡಿ

ಕಳೆದೊಂದು ತಿಂಗಳ ಅವಧಿ ಜೀವನದಲ್ಲಿ ಬಹುಕಾಲ ನೆನಪಿನಲ್ಲಿ ಉಳಿಯುವ ವಿಶಿಷ್ಟ ಅನುಭವಗಳನ್ನು ನೀಡಿದೆ. ಚುನಾವಣಾ ಪ್ರಚಾರ ನಿಮಿತ್ತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ತುಂಬೆಲ್ಲ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ್ದೇನೆ. ಹೋದ ಕಡೆಯೆಲ್ಲ ಜನರು ನನ್ನನ್ನು ತಮ್ಮ ಕುಟುಂಬ ಸದಸ್ಯೆಯಂತೆ ಕಂಡಿದ್ದಾರೆ, ಪ್ರೀತಿ ತೋರಿದ್ದಾರೆ, ವಿಶ್ವಾಸ ತುಂಬಿದ್ದಾರೆ. ನಿಮ್ಮೆಲ್ಲರ ಪ್ರೀತಿಯ ಋಣ ದೊಡ್ಡದು, ಮುಂದಿನ ದಿನಗಳಲ್ಲಿ ನಿಮ್ಮ ಸೇವೆಯ ಮೂಲಕ ಆ ಋಣ ತೀರಿಸುವ ಪ್ರಯತ್ನ ಮಾಡುತ್ತೇನೆ.

ನನ್ನ ಈ ಪಯಣದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಂದ ದೊರೆತ ಬೆಂಬಲಕ್ಕೆ ಎಷ್ಟು ಕೃತಜ್ಞತೆ ಸಲ್ಲಿಸಿದರು ಕಡಿಮೆಯೆ. ತಾವೇ ಅಭ್ಯರ್ಥಿ ಎನ್ನುವಂತೆ ಹಗಲು ರಾತ್ರಿ ನಿಸ್ವಾರ್ಥದಿಂದ ಪ್ರಚಾರ ನಡೆಸಿದ, ಮತ ಯಾಚಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು.

ಬದಲಾವಣೆಯ ನನ್ನ ಪ್ರಯತ್ನಕ್ಕೆ ಜೊತೆನಿಂತು ಬೆಂಬಲಿಸಿದ ಪ್ರತಿಯೊಬ್ಬರಿಗೂ ನಾನು ಋಣಿ. ಸಂಸದೆಯಾಗಿ ನಿಮ್ಮ ಸೇವೆ ಮಾಡುವ ಭಾಗ್ಯ ನನ್ನದಾಗಲಿ ಎಂದು ಆಶಿಸುತ್ತೇನೆ.

ಮತದಾನ ಮಾಡಿದ ಪ್ರತಿಯೊಬ್ಬರಿಗೂ ನನ್ನ ಅನಂತ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments