Webdunia - Bharat's app for daily news and videos

Install App

ಬಿಬಿಎಂಪಿ ವಿಭಜನೆಯ ವಿರುದ್ಧ ಮತದಾರರು ಜನಾದೇಶ ನೀಡಿದ್ದಾರೆ: ಡಿ.ವಿ.ಸದಾನಂದಗೌಡ

Webdunia
ಮಂಗಳವಾರ, 25 ಆಗಸ್ಟ್ 2015 (14:15 IST)
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ನೇತೃತ್ವದಲ್ಲಿ ನಾವೆಲ್ಲರು ಸೇರಿ ಯಶಸ್ವಿ ಕಾರ್ಯಾಚರಣೆ ಮಾಡಿದ್ದೇವೆ. ಕಾಂಗ್ರೆಸ್ ಸವಾಲ್‌ನ್ನು ಯಶಸ್ವಿಯಾಗಿ ಸ್ವೀಕರಿಸಿ ಗೆಲುವು ಸಾಧಿಸಿದ್ದೇವೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಂತಸ ವ್ಯಕ್ತಪಡಿಸಿದರು.
 
ಬಿಜೆಪಿ ಕಾರ್ಯಕರ್ತರು ತಮ್ಮ ಪರಿಶ್ರಮದಿಂದ ಪಕ್ಷಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಬೆಂಗಳೂರಿನ ಮತದಾರರು ತುಂಬಾ ಪ್ರಜ್ಞಾವಂತರಾಗಿದ್ದರಿಂದ ಸಿದ್ದರಾಮಯ್ಯ ಸರಕಾರ ಟೇಕಾಫ್ ಆಗಿಲ್ಲ ಎಂದು ಜನತೆ ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.
 
ಬಿಬಿಎಂಪಿ ವಿಭಜನೆಯ ವಿರುದ್ಧ ಮತದಾರರು ಜನಾದೇಶ ನೀಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ಮತದಾರರು ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಾರೆ ಎಂದು ಭಾವಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಪ ಮಾಡಿಕೊಳ್ಳುವುದು ಬೇಡ. ನಗರ ಪ್ರದಕ್ಷಿಣೆಯನ್ನು ಮುಂದುವರಿಸಲಿ ಎಂದು ಸಲಹೆ ನೀಡಿದರು.
 
ಬಿಬಿಎಂಪಿ ವಿಭಜನೆಯ ತೀರ್ಪು ರಾಷ್ಟ್ರಪತಿಗಳ ಅಂಗಳದಲ್ಲಿರುವುದರಿಂದ ಕೂಡಲೇ ವಿಭಜನೆ ವಿಷಯವನ್ನು ಹಿಂಪಡೆದು ಮತದಾರರ ಆದೇಶಕ್ಕೆ ತಲೆಬಾಗಿ ಎಂದು ಸಿದ್ದರಾಮಯ್ಯ ಸರಕಾರವನ್ನು ಸಚಿವ ಡಿವಿಎಸ್ ಕೋರಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments