Webdunia - Bharat's app for daily news and videos

Install App

ನನ್ನನ್ನು ಆಶೀರ್ವದಿಸಿದಂತೆ ಕಾಂಗ್ರೆಸ್ ಪಕ್ಷವನ್ನು ಆಶೀರ್ವದಿಸಿ: ಅಂಬರೀಷ್

Webdunia
ಶನಿವಾರ, 6 ಫೆಬ್ರವರಿ 2016 (15:12 IST)
ನಾನು ಸಾಕಷ್ಟು ರಾಜಕಾರಣಿಗಳನ್ನು ನೋಡಿದ್ದೇನೆ ನಾನೇನು ದೊಡ್ಡ ರಾಜಕಾರಣಿಯಲ್ಲ. ಹಿರಿಯ ರಾಜಕಾರಣಿಗಳನ್ನು ನೋಡಿ ರಾಜಕೀಯ ಕಲಿತಿದ್ದೇನೆ. ನನಗೆ ನಟನಾಗಿ ಆಶೀರ್ವದಿಸಿದ್ದೀರಿ, ಕಾಂಗ್ರೆಸ್ ಪಕ್ಷಕ್ಕೂ ಆಶೀರ್ವದಿಸಿ ಎಂದು ವಸತಿ ಖಾತೆ ಸಚಿವ ಅಂಬರೀಷ್ ಹೇಳಿದ್ದಾರೆ. 
 
ಮೈಸೂರಿನಲ್ಲಿ ನಡೆಯುತ್ತಿರುವ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅಂಬರೀಷ್, ಇಂತಹ  ಸರಕಾರವನ್ನು ನಾನು ಯಾವತ್ತೂ ನೋಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೊಗಳಿದರು.
 
ಕಾಂಗ್ರೆಸ್ ಪಕ್ಷ ಉಳಿದರೆ ನಾವೆಲ್ಲಾ ಉಳಿಯುತ್ತೇವೆ. ಕಾಂಗ್ರೆಸ್ ಪಕ್ಷ ಇಲ್ಲವೆಂದಾದಲ್ಲಿ ನಾವು ಕಾಣೆಯಾಗುತ್ತೇವೆ. ಮುಂದಿನ ಚುನಾವಣೆಯ ರೂಪರೇಷೆಗಳನ್ನು ಸಿದ್ದಪಡಿಸಲು ಮೈಸೂರು ಸಮಾವೇಶ ಆಯೋಜಿಸಲಾಗಿದೆ ಎಂದರು.
 
ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಒಂದಾಗಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.
 
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರರಹಿತ ಸರಕಾರವಾಗಿದೆ ಹಿಂದಿನ ಬಿಜೆಪಿ ಸರಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿತ್ತು ಎಂದು ವಸತಿ ಖಾತೆ ಸಚಿವ ಅಂಬರೀಷ್ ವಾಗ್ದಾಳಿ ನಡೆಸಿದರು.  

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments