ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ

Webdunia
ಸೋಮವಾರ, 17 ಏಪ್ರಿಲ್ 2023 (18:00 IST)
158 - ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸಂಜಯನಗರ ಹಾಗೂ ಡಾಲರ್ಸ್ ಕಾಲೋನಿಯ ಸುತ್ತಮುತ್ತಲಿನ ವಸತಿ ಸಮುಚ್ಚಯಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೆ ಮತದಾನ ಮಾಡುವಂತೆ ಅರಿವು ಮೂಡಿಸಲಾಯಿತು.
 
ಪೂರ್ವ ವಲಯ ಆಯುಕ್ತರಾದ ಶ್ರೀ ಪಿ.ಎನ್. ರವೀಂದ್ರ ರವರ ನೇತೃತ್ವದಲ್ಲಿ ಸಂಜಯ್ ನಗರದ ಫೆಬೆಲ್ ಬೇ ಅಪಾರ್ಟ್‌ಮೆಂಟ್, ಸ್ಟರ್ಲಿಂಗ್ ಅಪಾರ್ಟ್‌ಮೆಂಟ್, ಆಂಡ್ರಿಯಾ ಅಪಾರ್ಟ್‌ಮೆಂಟ್ ಗಳಿಗೆ ಇಂದು ಭೇಟಿ ನೀಡಿ ಅಲ್ಲಿ ವಾಸವಿರುವ ನಿವಾಸಿಗಳಲ್ಲಿ ಮತದಾನ ಮಾಡುವ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.
 
ಡಾಲರ್ಸ್ ಕಾಲೋನಿಯ ಪ್ರಮುಖ ರಸ್ತೆಗಳಲ್ಲಿ ನಡೆದ ಜಾಥಾ ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಪಾಲಿಕೆ ಅಧಿಕಾರಿ-ಸಿಬ್ಬಂದಿ ವರ್ಗವು ಬಿತ್ತಿಪತ್ರಗಳನ್ನು ಪ್ರದರ್ಶಿಸಿಕೊಂಡು ಮತದಾನದ ಘೋಷಣೆಗಳನ್ನು ಕೂಗುತ್ತಾ ಸಾಗಿದರು. ಈ ವೇಳೆ ಆಟೋದಲ್ಲಿ ಧ್ವನಿವರ್ಧಕಗಳನ್ನು ಅಳವಡಿಸಿಕೊಂಡು ಮತದಾನ ಮಾಡುವ ಬಗ್ಗೆ ನಾಗರಿಕರು ಸ್ವತಃ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವಂತೆ ಪ್ರೇರೇಪಿಸುವ ಕೆಲಸ ಮಾಡಲಾಯಿತು.
 
ಈ ವೇಳೆ ಕಂದಾಯ ಅಧಿಕಾರಿ ಹಾಗೂ ಮತದಾರರ ನೋಂದಣಾಧಿಕಾರಿ ಶ್ರೀನಿವಾಸ್ ಮೂರ್ತಿ, ಮೌಲ್ಯಮಾಪಕರಾದ ಅಮೃತ್ ರಾಜ್, ಆರೋಗ್ಯ/ಕಂದಾಯ ಇಲಾಖೆಯ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಡುತ್ತಾ ರಸ್ತೆಗೇ ಬಂದ ಮಗುವನ್ನು ಹೀರೋನಂತೆ ರಕ್ಷಿಸಿದ ನಾಯಿ Video

Karnataka Weather: ಇಂದಿನ ಹವಾಮಾನ ಎಚ್ಚರಿಕೆ ಬಗ್ಗೆ ತಪ್ಪದೇ ಗಮನಿಸಿ

ಪಶ್ಚಿಮ ಏಷ್ಯಾ ಸಂಘರ್ಷ: ರಾಜ್ಯಸಭೆಯಲ್ಲಿ ನರೇಂದ್ರ ಮೋದಿ ಮಹತ್ವದ ಮಾತು ಸಾಧ್ಯತೆ

ಇಸ್ರೇಲ್‌ನಲ್ಲಿರುವ ಭಾರತೀಯರ ಬಗ್ಗೆ ಹೊಸ ಅಪ್ಡೇಟ್ ಕೊಟ್ಟ ವಿದೇಶಾಂಗ ವ್ಯವಹಾರಗಳ ಸಚಿವಾಲಯ

ಪ್ರಯಾಗ್‌ರಾಜ್‌ ಕಟ್ಟಡ ಕುಸಿತ ಪ್ರಕರಣ, ಮೃತರ ಕುಟುಂಬಕ್ಕೆ ಪ್ರಧಾನಿ 2ಲಕ್ಷ ಘೋಷಣೆ

ಮುಂದಿನ ಸುದ್ದಿ
Show comments