Webdunia - Bharat's app for daily news and videos

Install App

ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಜಾಥ ಕಾರ್ಯಕ್ರಮ

Webdunia
ಶನಿವಾರ, 29 ಏಪ್ರಿಲ್ 2023 (15:30 IST)
ದಕ್ಷಿಣ ವಲಯದ ವಿವಿಧ ಇಲಾಖೆಗಳ ಅಧಿಕಾರಿ/ನೌಕರರಿಂದ ಸಾರ್ವಜನಿಕರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಇಂದು ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಹಣಕಾಸು ವಿಭಾಗದ ವಿಶೇಷ ಆಯುಕ್ತರು ಹಾಗೂ ವಲಯ ಆಯುಕ್ತರಾದ ಶ್ರೀ ಜಯರಾಮ್ ರಾಯಪುರ ರವರು ಚಾಲನೆ ನೀಡಿದರು. 
 
ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಸಂಬಂಧ ಮಾನ್ಯ ಚುನಾವಣಾ ಆಯೋಗ ರವರ ಆದೇಶದ ಮೇರೆಗೆ ಮತದಾರರಲ್ಲಿ ಮತದಾನದ ಬಗ್ಗೆ ಅರಿವು/ಜಾಗೃತಿ ಮೂಡಿಸಲು ಹಲವಾರು ಮತದಾನ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ, ಅದರ ಭಾಗವಾಗಿ ಇಂದು ಬಿ.ಎಂ.ಟಿ.ಸಿ ಬಸ್ ನಿಲ್ದಾಣ, ಶಾಂತಿನಗರ ಮತ್ತು ವಿಲ್ಸನ್ ಗಾರ್ಡನ್‌ನ ಮುಖ್ಯರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ ಹಾಗೂ ಬೀದಿ ನಾಟಕವನ್ನು ನಡೆಸಲಾಯಿತು.
 
ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಯಾವೊಬ್ಬ ಮತದಾರರು ಮತದಾನದಿಂದ ಹೊರಗುಳಿಯಬಾರದೆಂಬ ಉದ್ದೇಶದಿಂದ ಹಾಗೂ ಎಲ್ಲಾ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ನಾಗರಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು. 
 
ಚುನಾವಣಾ ಅಕ್ರಮಗಳ ಬಗ್ಗೆ C-VIGIL ತಂತ್ರಾಶದ ಮೂಲಕ ದೂರು ದಾಖಲಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದ್ದಾರೆ. ಎಲ್ಲರೂ ವಿದ್ಯಾವಂತರಾಗಿದ್ದು, ಸಮಾಜದ ಒಳಿತಿಗಾಗಿ ಉತ್ತಮ ಅಭ್ಯರ್ಥಿಗೆ ಮತಚಾಯಿಸಿ ಎಂದು ಮನವಿ ಮಾಡಿದರು.
 
ಮಾತದಾನ ಮಾಡುವ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಲು ಮಾತದಾನ ಸಂಕಲ್ಪ ನಾಟಕವನ್ನು ಪ್ರದರ್ಶಿಸಲಾಯಿತು.
 
ಈ ವೇಳೆ ಬಿ.ಎಂ.ಟಿ.ಸಿಯ ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ, ಬಿಎಂಟಿಸಿ ಐಟಿ ನಿರ್ದೇಶಕರಾದ ಸೂರ್ಯಸೇನ್, ದಕ್ಷಿಣ ವಲಯದ ಉಪ ಆಯುಕ್ತರಾದ ಲಕ್ಷ್ಮೀದೇವಿ, ನೋಡಲ್ ಅಧಿಕಾರಿಯಾದ ಸುರೇಶ್, ಬಿಎಂಟಿಸಿಯ ಅಧಿಕಾರಿ/ಸಿಬ್ಬಂದಿಗಳು, ಪೌರಕಾರ್ಮಿಕರು, ಕಂದಾಯ ಅಧಿಕಾರಿಗಳು, ವಿದ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

Pralhad Joshi: ಭಾರತ ಈಗ ಜಗತ್ತಿಗೆ ನಂ 4, ಸದ್ಯದಲ್ಲೇ ನಂ 3 ಆಗ್ತೀವಿ: ಪ್ರಲ್ಹಾದ್ ಜೋಶಿ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

ಮುಂದಿನ ಸುದ್ದಿ
Show comments