Select Your Language

Notifications

webdunia
webdunia
webdunia
webdunia

ಕಬ್ಬು ಬೆಳೆಗಾರರಿಂದ ಮತದಾನ ಬಹಿಷ್ಕಾರ

ಕಬ್ಬು ಬೆಳೆಗಾರರಿಂದ ಮತದಾನ ಬಹಿಷ್ಕಾರ
ಮಂಡ್ಯ , ಶನಿವಾರ, 3 ನವೆಂಬರ್ 2018 (16:06 IST)
ಮಂಡ್ಯ ಲೋಕಸಭಾ ಉಪ ಚುನಾವಣೆಗೆ ಎನ್.ಎಸ್.ಎಲ್ ಕಾರ್ಖಾನೆಗೆ ಕಬ್ಬು ಪೂರೈಸುವ ರೈತರಿಂದ ಮತದಾನ ಬಹಿಷ್ಕಾರ ಹಾಕಲಾಗಿದೆ.

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪದ ಎನ್.ಎಸ್.ಎಲ್. ಕಾರ್ಖಾನೆಯಲ್ಲಿ ಕಬ್ಬು ಕಟಾವು ಕೂಲಿ ಏರಿಕೆ ಹಾಗೂ ಒಂದೇ ಕಂತಿನಲ್ಲಿ ಕಬ್ಬಿನ ಹಣ ನೀಡದಿರುವುದಕ್ಕೆ ರೈತರಿಂದ ಆಕ್ರೋಶ ವ್ಯಕ್ತವಾಗಿದೆ.

ರೈತರ ನೆರವಿಗೆ ಬಾರದ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಧೋರಣೆಗೆ ಖಂಡಿಸಿ ಮತದಾನ ಬಹಿಷ್ಕಾರ ಹಾಕಿದ್ದಾಗಿ ರೈತರು ತಿಳಿಸಿದ್ದಾರೆ.

450 ರೂ. ಇದ್ದ ಕಬ್ಬು ಕಟಾವು ದರವನ್ನ ಏಕಾಏಕಿ 650 ರೂ. ಗೆ ಏರಿಕೆ ಮಾಡಿರುವುದಕ್ಕೆ ಬೆಳೆಗಾರರು ವಿರೋಧ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ಪ್ರತಿ ಟನ್ ಕಬ್ಬಿಗೆ 2612 ರೂ. ನಿಗದಿ ಮಾಡಿದ್ರೂ ಮೊದಲ ಕಂತಿನಲ್ಲಿ 1,500 ರೂ. ನೀಡಲಾಗುತ್ತಿದೆ. ಕಬ್ಬು ಪೂರೈಕೆಯಾಗಿ ಎರಡು ತಿಂಗಳ ಬಳಿಕ ಮೊದಲ ಕಂತಿನ ಹಣ ನೀಡುತ್ತಿರುವ ಕಾರ್ಖಾನೆ ಆಡಳಿತ ಮಂಡಳಿಯು ಉಳಿಕೆ ಹಣ ನೀಡುವ ಕುರಿತು ರೈತರಿಗೆ ಮಾಹಿತಿ ನೀಡುತ್ತಿಲ್ಲ ಎನ್ನಲಾಗಿದೆ.  

ಕಾರ್ಖಾನೆಯ ರೈತ ವಿರೋಧಿ ನೀತಿ ಖಂಡಿಸಿ ಕಳೆದ 4 ದಿನಗಳಿಂದ ರೈತರು ಪ್ರತಿಭಟಿಸುತ್ತಿದ್ದಾರೆ. ರೈತರ ಬೇಡಿಕೆ ಈಡೇರಿಕೆಗೆ ಕಾರ್ಖಾನೆ ಆಡಳಿತ ಮಂಡಳಿ ನಿರಾಸಕ್ತಿ ವಹಿಸಿದೆ.  




Share this Story:

Follow Webdunia kannada

ಮುಂದಿನ ಸುದ್ದಿ

ಗಾಂಧೀಜಿ ಶಿಲ್ಪಗಳ ಲೋಕಾರ್ಪಣೆ ನ.6ರಂದು