Webdunia - Bharat's app for daily news and videos

Install App

ಪರಿಷತ್‌ನಲ್ಲಿ ವಿಟಿಯು ತಿದ್ದುಪಡಿ ವಿಧೇಯಕ ಅಂಗೀಕಾರ

Webdunia
ಗುರುವಾರ, 30 ಜುಲೈ 2015 (15:14 IST)
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ತಿದ್ದುಪಡಿ ವಿಧೇಯಕವನ್ನು ವಿಧಾನ ಪರಿಷತ್‌ನಲ್ಲಿ ಇಂದು ಅಂಗೀಕರಿಸಲಾಗಿದೆ. 
 
ಉನ್ನತ ಶಿಕ್ಷಣ ಸಚಿವ ಆರ್.ವಿ.ದೇಶಪಾಂಡೆ ಅವರು ವಿಧೇಯಕವನ್ನು ಮಂಡಿಸಿದ್ದು, ಅಂಗೀಕರವಾಗಿದೆ. ಇನ್ನು ವಿಧೇಯಕವನ್ನು ಕುರಿತು ಚರ್ಚೆ ನಡೆಸುತ್ತಿದ್ದ ವೇಳೆ ಪ್ರತಿಪಕ್ಷ ಸದಸ್ಯರು ಸಚಿವರ ವಿರುದ್ಧ ಕೆಲ ಕಾಲ ವಾಗ್ವಾದಗಳನ್ನೂ ನಡೆಸಿದರು. ಈ ನಡುವೆಯೂ ಕೂಡ ವಿಧೇಯಕಕ್ಕೆ ಅಂಗೀಕಾರ ಪಡೆಯುವಲ್ಲಿ ಸರ್ಕಾರ ಯಶಸ್ವಿಯಾಯಿತು. ವಿವಿಯಲ್ಲಿ ಭ್ರಷ್ಟಾಚಾರವನ್ನು ನಿಗ್ರಹಿಸುವ ಸಲುವಾಗಿ ಈ ವಿಧೇಯಕವನ್ನು ಅಂಗೀಕರಿಸಲಾಗಿದೆ. 
 
ಏಕೆ ವಾಗ್ವಾದ?:
ವಿವಿಯ ಆದಾಯ ತೆರಿಗೆ ಸಂಗ್ರಹಣಾ ವಿಷಯದಲ್ಲಿ ಅಕ್ರಮ ಕಂಡು ಬಂದಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿವಿಗಳನ್ನೂ ಟಾರ್ಗೆಟ್ ಮಾಡಿಕೊಂಡು ತೆರಿಗೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ ಎಂಬ ಹೇಳಿಕೆಯನ್ನು ಸಚಿವರು ನೀಡಿದರು. ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷಗಳ ಸದಸ್ಯರು, ಆದಾಯ ತೆರಿಗೆ ಇಲಾಖೆ ತನ್ನ ಕರ್ತವ್ಯ ನಿರ್ವಹಿಸಿದೆಯಷ್ಟೇ. ಅದಕ್ಕೆ ನೀವು ಆದಾಯ ತೆರಿಗೆ ಇಲಾಖೆಯನ್ನು ಮುಚ್ಚಲು ಯತ್ನಿಸುತ್ತಿದ್ದೀರಾ ಎಂದು ಸಚಿವರ ವಿರುದ್ಧ ಗುಡುಗಿದರು. ಇತ್ತೀಚೆಗೆ ತೆರಿಗೆ ಅಧಿಕಾರಿಗಳು ವಿವಿಯ ಮೇಲೆ ದಾಳಿ ನಡೆಸಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments