Webdunia - Bharat's app for daily news and videos

Install App

ವಿವಿ ಪರೀಕ್ಷೆ ಮುಂದೂಡಿಕೆ , ಮಹಾ ಎಡವಟ್ಟು

Webdunia
ಶನಿವಾರ, 1 ಅಕ್ಟೋಬರ್ 2022 (16:13 IST)
ಪರೀಕ್ಷೆ ಬರೆಯಲು ಬಂದಿದ್ದ ನೂರಾರು ವಿದ್ಯಾರ್ಥಿಗಳ ಭವಿಷ್ಯದಲ್ಲಿ ಬೆಗಳೂರು ನಗರ ವಿವಿ ಚೆಲ್ಲಾಟವಾಡಿದೆ. ಈ ವರ್ಷದ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳು ಪರೀಕ್ಷಾ ಹಾಲ್‍ನಲ್ಲಿ ನೀಡಿದ ಪ್ರಶ್ನೆಪತ್ರಿಕೆ ಕಂಡು ದಿಗ್ಬಾಂತರಾಗುವಂತಾಗಿತ್ತು.
ವಿವಿ ಸಿಬ್ಬಂದಿಗಳು ಈ ವರ್ಷದ ಪ್ರಶ್ನೆ ಪತ್ರಿಕೆ ಬದಲಿಗೆ ಕಳೆದ ವರ್ಷದ ಪ್ರಶ್ನೆ ಪತ್ರಿಕೆ ನೀಡಿದ್ದರು.
 
ವಿವಿಯ ಮೌಲ್ಯಮಾಪನ ವಿಭಾಗದ ಕುಲ ಸಚಿವರ ಈ ನಿರ್ಲಕ್ಷ್ಯದಿಂದಾಗಿ ನಿನ್ನೆ ನಡೆಯಬೇಕಿದ್ದ ಬಿಎಸ್‍ಸಿ ಬಯೋಟೆಕ್ನಾಲಜಿಯ ನಾಲ್ಕನೆ ಸೆಮಿಸ್ಟರ್‍ನ ಜೆಜಿಟಿಕ್ ಎಂಜಿನಿಯರಿಂಗ್ ವಿಷಯದ ಪರೀಕ್ಷೆ ಮುಂದೂಡಲಾಗಿದೆ.
 
ರಾಜ್ಯದ ನಾನಾ ಮೂಲೆಗಳಿಂದ ಪರೀಕ್ಷೆ ಬರೆಯಲು ಬಂದಿದ್ದ ನೂರಾರು ವಿದ್ಯಾರ್ಥಿಗಳು ವಿವಿಯ ಈ ಬೇಜವಬ್ದಾರಿತನಕ್ಕೆ ಹಿಡಿಶಾಪ ಹಾಕುತ್ತ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಮನೆಗಳಿಗೆ ಹಿಂತಿರುಗುವಂತಾಯಿತು.
 
ತಾನು ಮಾಡಿದ ಎಡವಟ್ಟು ಮುಚ್ಚಿಟ್ಟುಕೊಳ್ಳುವ ಉದ್ದೇಶದಿಂದ ವಿವಿ ಅಧಿಕಾರಿಗಳು ತಾಂತ್ರಿಕ ಸಮಸ್ಯೆಯಿಂದ ಪರೀಕ್ಷೆ ಮುಂದೂಡಲಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ.
 
ತಾಂತ್ರಿಕ ಸಮಸ್ಯೆಯಿಂದ ಪರೀಕ್ಷೆ ಪೋಸ್ಟ್ ಫೋನ್ ಮಾಡಲಾಗಿದೆ ಎಂದು ವಿವಿ ಆಡಳಿತ ಲಿಖಿತ ಪ್ರಕಟಣೆ ಹೊರಡಿಸಿದೆ.
ಪ್ರಶ್ನೆ ಪತ್ರಿಕೆ ಕ್ಯೂಆರ್ ಕೋಡ್ ಬದಲಾಗಿರುವುದರಿಂದ ಇಂತಹ ಸಮಸ್ಯೆ ಉಂಟಾಗಿದೆ. ಹೀಗಾಗಿ ಪರೀಕ್ಷೆ ಮುಂದೂಡಿದ್ದೇವೆ.
 
ಹೀಗಾಗಿ ಪರೀಕ್ಷೆಯನ್ನು ಮುಂದಿನ ತಿಂಗಳಿಗೆ ಮುಂದೂಡಿ ಇಂತಹ ಪ್ರಮಾದಕ್ಕೆ ಕಾರಣರಾಗಿರುವ ಬಿಒಇ ಸಮಿತಿ ಅಧ್ಯಕ್ಷರ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಬೆಂಗಳೂರು ನಗರ ವಿವಿ ಮೌಲ್ಯ ಮಾಪನ ವಿಭಾಗದ ಕುಲಸಚಿವ ಡಾ. ಲೋಕೇಶ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments